This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಧಾರವಾಡ

ಹುಬ್ಬಳ್ಳಿಯ ದರ್ಗಾ ಪ್ರದೇಶಕ್ಕೆ CM ಭೇಟಿ ಪರಿಶೀಲನೆ – ಧಾರ್ಮಿಕ ಸ್ಥಳಗಳನ್ನು ತೆರವು ಮಾಡುತ್ತಿರುವುದು ನೋವಿನ ಸಂಗತಿ ಎಂದ ನಾಡ ದೊರೆ

WhatsApp Group Join Now
Telegram Group Join Now

ಹುಬ್ಬಳ್ಳಿ

ನ್ಯಾಯಾಲಯದ ಆದೇಶದಂತೆ ತೆರುವು ಮಾಡು ತ್ತಿರುವ ಹುಬ್ಬಳ್ಳಿಯ ಬೈರಿದೇವರಕೊಪ್ಪ ದಲ್ಲಿ‌ನ ದರ್ಗಾ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿ ದರು.ನಾಗರಿಕತೆ ಬೆಳೆಯುತ್ತಿದೆ.ಅವಶ್ಯಕತೆಯು ಹೆಚ್ಚಿದೆ ಅಲ್ಲದೇ ರಸ್ತೆಗಳ ವಿಸ್ತೀರ್ಣವು ಹೆಚ್ಚಾ ಗುತ್ತಿ ರುವ ಕಾರಣ ಧಾರ್ಮಿಕ ಸ್ಥಳಗಳನ್ನು ತೆರವು ಮಾಡುವುದು ಅನಿವಾರ್ಯವಾಗಿರುವ ಹಿನ್ನೆಲೆ ಯಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿದೆ.

ಇದೇ ರಸ್ತೆಯಲ್ಲಿಯೇ 13 ಧಾರ್ಮಿಕ ಸ್ಥಳಗಳನ್ನು ತೆರವು ಮಾಡಲಾಗಿದೆ. ದೇಗುಲಗಳನ್ನು ಹಾಗೂ ಮಸೀದಿ ಮತ್ತು ಧಾರ್ಮಿಕ ಸ್ಥಳಗಳನ್ನು ತೆರವು ಮಾಡುವುದು ನಿಜಕ್ಕೂ ನೋವಿನ ಸಂಗತಿಯಾ ಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಭೈರಿದೇವರಕೊಪ್ಪದ ದರ್ಗಾಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು ಭೈರಿದೇವರಕೊಪ್ಪದ ದರ್ಗಾ ತೆರವು ಕಾರ್ಯಾಚರಣೆ ವೀಕ್ಷಣೆಗೆ ಬಂದಿದ್ದೆ ಇಲ್ಲಿನ ಮುಸ್ಲಿಂ ಮುಖಂಡರು ಹಾಗೂ ಅಂಜುಮನ್ ಸಂಸ್ಥೆಯ ಪದಾಧಿಕಾರಿಗಳು ಶಾಂತಿ ಹಾಗೂ ಸೌಹಾರ್ದತೆಯಿಂದ ಇಂತಹ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ.ಅವರಿಗೆ ತುಂಬು ಹೃದಯದಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈಗಾಗಲೇ ದರ್ಗಾವನ್ನು ತೆರವು ಮಾಡಿದ್ದಾರೆ. ಗೋರಿಗಳನ್ನು ಕೂಡ ಶಿಫ್ಟ್ ಮಾಡಿದ್ದಾರೆ. ಹೊಸ ದಾದ ಮಸೀದಿ ನಿರ್ಮಾಣದ ಬಗ್ಗೆ ಕೂಡ ನನ್ನ ಜೊತೆಗೆ ಮಾತನಾಡಿದ್ದಾರೆ‌.ಅವರೆಲ್ಲರೂ ಕೂಡಿ ಕೊಂಡು ಸ್ಥಳದ ಬಗ್ಗೆ ನಿರ್ಮಾಣದ ಬಗ್ಗೆ ಮಾಹಿತಿ ನೀಡಲಿ. ಈ ಬಗ್ಗೆ ಸಹಕಾರ ಮಾಡುತ್ತೇನೆ ಎಂದು ಅವರು ಹೇಳಿದರು.

ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.ಅಲ್ಲದೇ ಹೈಕೋರ್ಟ್ ಕೂಡ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರ ಜನರ ಅವಶ್ಯಕತೆಗೆ ಅನುಗುಣವಾಗಿ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.ಧಾರ್ಮಿಕ ಸ್ಥಳಗಳನ್ನು ತೆರವು ಮಾಡುವುದು ನೋವಿನ ಸಂಗತಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk