ಬೆಂಗಳೂರು –
ತಾಂತ್ರಿಕ ಶಿಕ್ಷಣ ಆಧಾರಿತ ಶಾಲೆಗಳನ್ನು ರಾಜ್ಯದಲ್ಲಿ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್ನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಬಿಯಾಂಡ್ ಬೆಂಗಳೂರು ‘ಇನ್ನೋವೇ ಷನ್ ಆಯಂಡ್ ಇಂಪ್ಯಾಕ್ಟ್ ಹುಬ್ಬಳ್ಳಿ ಕಾರ್ಯಕ್ರಮವನ್ನು ವರ್ಚುವಲ್ ಆಗಿ ಉದ್ಘಾಟಿಸಿ ಅವರು ಮಾತನಾಡಿದರು.
1960ರಲ್ಲಿಯೇ ಹುಬ್ಬಳ್ಳಿಯಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಪ್ರೌಢಶಾಲೆ ಇತ್ತು.ಮುಂದೆ ಅದು ಬಂದ್ ಆಯಿತು.ಮಕ್ಕ ಳಲ್ಲಿ ಗ್ರಹಿಸುವ ಸಾಮರ್ಥ್ಯ ಚೆನ್ನಾಗಿರುತ್ತದೆ.ಅವರಿಗೆ ಆ ಹಂತದಿಂದಲೇ ತಾಂತ್ರಿಕ ಶಿಕ್ಷಣ ನೀಡುವ ಕೆಲಸ ಮಾಡಲಾ ಗುವುದು ಎಂದರು.ಉತ್ತರ ಕರ್ನಾಟಕದಲ್ಲಿ ಪ್ರತಿಭೆಗಳಿವೆ. ಅವರಿಗೆ ಅವಕಾಶ ಕಲ್ಪಿಸಬೇಕಿದೆ. ಬೆಂಗಳೂರು,ಪುಣೆ ಮುಂತಾದೆಡೆ ಆಗಿರುವ ಐಟಿ,ಬಿಟಿ ಕ್ರಾಂತಿಯಲ್ಲಿ ಉತ್ತರ ಕರ್ನಾಟಕದ ಪ್ರತಿಭೆಗಳ ಕೊಡುಗೆ ದೊಡ್ಡ ಪ್ರಮಾಣ ದಲ್ಲಿದೆ ಎಂದರು.
‘
ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಹುಬ್ಬಳ್ಳಿ ಯಲ್ಲಿ ಮಾತನಾಡಿ ಹುಬ್ಬಳ್ಳಿಯಲ್ಲಿ ಎ.ಐ.(ಕೃತಕ ಬುದ್ಧಿ ಮತ್ತೆ) ಮತ್ತು ಡಾಟಾ ಎಂಜಿನಿಯರಿಂಗ್ಗೆ ಸಂಬಂಧಿಸಿ ದಂತೆ ಸೆಂಟರ್ ಆಫ್ ಎಕ್ಸ್ಲೆನ್ಸ್ ಕೇಂದ್ರವನ್ನು ಶೀಘ್ರವೇ ಸ್ಥಾಪಿಸಲಾಗುವುದು.ಸಾಫ್ಟ್ವೇರ್ ಪಾರ್ಕ್ ನಿರ್ಮಾಣಕ್ಕೆ 50 ಎಕರೆ ಜಮೀನು ಒದಗಿಸಲಾಗುವುದು ಎಂದರು.
ಪ್ರೌಢಶಾಲೆ ಹಂತದಿಂದಲೇ ಕೋಡಿಂಗ್ ಕಲಿಸಲಾಗು ವುದು.ಅದಕ್ಕೆ ಅಗತ್ಯವಿರುವ ಶಿಕ್ಷಕರ ನೇಮಕ ಮಾಡಿಕೊ ಳ್ಳಲಾಗುವುದು’ಎಂದರು.