This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ACB ಬಲೆಗೆ ಬಿದ್ದ ಪಾಲಿಕೆಯ ಆಯುಕ್ತರು – ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಯುಕ್ತರೊಂದಿಗೆ ಇನ್ನೋರ್ವ ಸಿಬ್ಬಂದಿ ಟ್ರ್ಯಾಪ್…..

WhatsApp Group Join Now
Telegram Group Join Now

ಕಲಬುರಗಿ

ಕಲಬುರಗಿ ಪಾಲಿಕೆಯ ಆಯುಕ್ತರು ಮತ್ತು ಇನ್ನೋರ್ವ ಸಿಬ್ಬಂದಿ ಯೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ಕಲಬು ರಗಿ ಯಲ್ಲಿ ನಡೆದಿದೆ‌.ಹೌದು ಕೋವಿಡ್ ಸಂದರ್ಭದಲ್ಲಿ ಕೋವಿಡ್ ಸುರಕ್ಷಾ ಚಕ್ರ ಸಹಾಯವಾಣಿಗಾಗಿ ಕೆಲಸ ಮಾಡಿದ್ದಕ್ಕಾಗಿ ಬರಬೇಕಿದ್ದ ಬಾಕಿ ಬಿಲ್ ಮೊತ್ತ ₹ 7.5 ಲಕ್ಷ ಪಡೆಯಲು ಲಂಚಕ್ಕೆ ಬೇಡಿಕೆ ಇಟ್ಟು ಅಧೀನ ಸಿಬ್ಬಂದಿ ಮೂಲಕ ಪಡೆಯುತ್ತಿದ್ದ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಡಾ.ಶಂಕರಪ್ಪ ವಣಿಕ್ಯಾಳ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

ಆಯುಕ್ತರ ಪರವಾಗಿ ₹ 1.42 ಲಕ್ಷ ಲಂಚದ ಹಣ ಪಡೆದಿದ್ದ ವಿಷಯ ನಿರ್ವಾಹಕ ಚನ್ನಪ್ಪ ಬನ್ನೂರ ಅವರನ್ನೂ ಕೂಡಾ ಎಸಿಬಿ ಅಧಿಕಾರಿ ಗಳು ಬಂಧಿಸಿದ್ದಾರೆ.ಕೋವಿಡ್ ಸುರಕ್ಷಾ ಸಹಾಯವಾಣಿಗಾಗಿ ಮಹಾನಗರ ಪಾಲಿಕೆಯು ಶರಣಬ ಸಪ್ಪ ಅಂಬೆಸಿಂಗ್ ಎಂಬುವವರ ಕಂಪನಿಯ ನೆರವನ್ನು ಪಡೆದಿತ್ತು.ಆ ಸೇವೆಗಾಗಿ ನೀಡಬೇಕಿದ್ದ ₹ 7.5 ಲಕ್ಷ ಬಿಲ್‌ಗೆ ಅನುಮೋದನೆ ನೀಡಬೇಕು ಎಂದರೆ ಶೇ 2ರಷ್ಟು ಲಂಚ ನೀಡಬೇಕು ಎಂದು ವಣಿಕ್ಯಾಳ ಬೇಡಿಕೆ ಇರಿಸಿದ್ದರು.

ಈ ಬಗ್ಗೆ ಶರಣಬಸಪ್ಪ ಎಸಿಬಿಗೆ ದೂರು ನೀಡಿದ್ದರು. ವಿಷಯ ನಿರ್ವಾಹಕ ಚನ್ನಪ್ಪಗೆ ಲಂಚದ ಹಣ ನೀಡುವ ಸಂದರ್ಭದಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಆತ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆಯುಕ್ತ ಶಂಕರಪ್ಪ ವಣಿಕ್ಯಾಳ ಪರವಾಗಿಯೇ ಹಣ ಪಡೆಯುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾಗಿ ಎಸಿಬಿ ಅಧಿಕಾರಿಗಳು ಇತ್ತ ದೂರು ದಾರರು ಸುದ್ದಿ ಸಂತೆ ಗೆ ತಿಳಿಸಿದ್ದಾರೆ.

ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಶಂಕರಪ್ಪ ವಣಿಕ್ಯಾಳ ಇತ್ತೀಚೆಗಷ್ಟೇ ಮಹಾನಗರ ಪಾಲಿಕೆ ಆಯುಕ್ತರಾಗಿ ಅಧಿ ಕಾರವನ್ನು ವಹಿಸಿಕೊಂಡಿದ್ದರು.ಐಎಎಸ್ ಶ್ರೇಣಿಯ ಅಧಿಕಾರಿಯನ್ನು ಪಾಲಿಕೆಗೆ ನೇಮಕ ಮಾಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಕೆಎಎಸ್ ಅಧಿಕಾರಿಯಾದ ವಣಿ ಕ್ಯಾಳ ಅವರನ್ನು ನೇಮಕ ಮಾಡಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು ಇದರ ಬೆನ್ನಲ್ಲೇ ಈಗ ಟ್ರ್ಯಾಪ್ ಆಗಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk