ಸಿದ್ದಾಪುರ –
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ 130ಕ್ಕಿಂತ ಕಡಿಮೆ ಇರುವ ಶಾಲೆಗಳಲ್ಲಿ ಇರುವ ದೈಹಿಕ ಶಿಕ್ಷಕರನ್ನು ತೆಗೆಯಲು ಸರ್ಕಾರದ ಆದೇಶದ ಬಗ್ಗೆ ವಸಂತ ಎಲ್. ನಾಯ್ಕ ಮನಮನೆ ಖಂಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು ತಾಲೂಕಿ ನಲ್ಲಿ 102 ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಗಳಿವೆ.ಆದರೆ ಇರುವ ದೈಹಿಕ ಶಿಕ್ಷಕರು ಕೇವಲ 8 ಮಾತ್ರ ಆದರೆ ಈಗಿನ ಆದೇಶದ ಪ್ರಕಾರ 130ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆ ಗಳಲ್ಲಿರುವ ದೈಹಿಕ ಶಿಕ್ಷಕರನ್ನು ತೆಗೆಯಲು ಮುಂದಾಗಿರುವ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.
ಸರ್ಕಾರವು ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆ ಕೈಗೊಳ್ಳುತ್ತೇವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿ ಇದರೊಂದಿಗೆ ದೈಹಿಕ ಶಿಕ್ಷಕರ ವರ್ಗಾವಣೆ ಆದೇಶಕ್ಕೆ ಖಂಡನೆ ಯನ್ನು ಮಾಡಿದರು.
ಸುದ್ದಿ ಸಂತೆ ನ್ಯೂಸ್ ಸಿದ್ದಾಪುರ…..