ಹೆಡ್ ಕಾನ್ಸ್‌ಟೇಬಲ್ ಚಂದ್ರು ಇನ್ನೂ ನೆನಪು ಮಾತ್ರ – ರಾಷ್ಟ್ರಪತಿ ಪದಕ ಪಡೆದು ಇಲಾಖೆ ಯಲ್ಲಿ ಸಾಕಷ್ಟು ಹೆಸರು ಮಾಡಿದ್ದ ಹೆಡ್ ಕಾನ್ಸ್‌ಟೇಬಲ್ ಗೆ ಸಂತಾಪ…..

Suddi Sante Desk
ಹೆಡ್ ಕಾನ್ಸ್‌ಟೇಬಲ್ ಚಂದ್ರು ಇನ್ನೂ ನೆನಪು ಮಾತ್ರ – ರಾಷ್ಟ್ರಪತಿ ಪದಕ ಪಡೆದು ಇಲಾಖೆ ಯಲ್ಲಿ ಸಾಕಷ್ಟು ಹೆಸರು ಮಾಡಿದ್ದ ಹೆಡ್ ಕಾನ್ಸ್‌ಟೇಬಲ್ ಗೆ ಸಂತಾಪ…..

ಮಂಗಳೂರು

ಹೆಡ್ ಕಾನ್ಸ್‌ಟೇಬಲ್ ಚಂದ್ರು ಇನ್ನೂ ನೆನಪು ಮಾತ್ರ – ರಾಷ್ಟ್ರಪತಿ ಪದಕ ಪಡೆದು ಇಲಾಖೆ ಯಲ್ಲಿ ಸಾಕಷ್ಟು ಹೆಸರು ಮಾಡಿದ್ದ ಹೆಡ್ ಕಾನ್ಸ್‌ಟೇಬಲ್ ಗೆ ಸಂತಾಪ…..

ಹೌದು ಕದ್ರಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಚಂದ್ರ ಅಡೂರು ನಿಧನರಾಗಿದ್ದಾರೆ. ರಾಜ್ಯ ಗುಪ್ತ ವಾರ್ತೆ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ಕದ್ರಿ ಠಾಣೆಯ ಹೆಡ್ ಕಾನ್ ಸ್ಟೇಬಲ್ ಚಂದ್ರ ಕೆ. ಅಡೂರು (48)ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದರು.ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ‌.ಮೂತ್ರಪಿಂಡಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು

ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.ಕಾಸರಗೋಡು ಜಿಲ್ಲೆಯ ಅಡೂರು ನಿವಾಸಿಯಾಗಿದ್ದ ಚಂದ್ರ ಕೆ. 1996ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂ ಡಿದ್ದರು.ಸಿಸಿಬಿ, ಸಿಸಿಆರ್ಬಿ,ಡಿಸಿಐಬಿ,ಸೆನ್, ಪಣಂಬೂರು,ಉಳ್ಳಾಲ, ಕಂಕನಾಡಿ, ಪಾಂಡೇಶ್ವರ,ಕದ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.ಹೆಡ್ ಕಾನ್ ಸ್ಟೇಬಲ್ ಆಗಿದ್ದ ಅವರು ಎಎಸ್ಸೈ ಹುದ್ದೆಗೆ ಭಡ್ತಿ ಹೊಂದುವುದ ರಲ್ಲಿದ್ದರು.ಅಪರಾಧ ಲೋಕದ ಆಳ ಅರಿವು ಹೊಂದಿದ್ದ ಚಂದ್ರ ಕೆ. ಅಡೂರು ಅನೇಕ ಪ್ರಕರಣಗಳನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಹಾಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಿಕಟ ಸಂಪರ್ಕದಲ್ಲಿದ್ದರು.ಸಣ್ಣ ಪ್ರಾಯ ದಲ್ಲೇ ಇಲಾಖೆಯಲ್ಲಿ ಮೆರೆದ ಕರ್ತವ್ಯ ನಿಷ್ಠೆಯು ಅವರನ್ನು ರಾಷ್ಟ್ರಪತಿ ಪದಕವು ಅರಸಿ ಬಂದಿತ್ತು. ಮೂರು ತಿಂಗಳ ಹಿಂದೆ ಮೂತ್ರಪಿಂಡಕ್ಕೆ ಸಂಬಂ ಧಿಸಿದ ಕಾಯಿಲೆಯಿಂದ ಅನಾರೋಗ್ಯಕ್ಕೀಡಾ ಗಿದ್ದ ಚಂದ್ರ ಕೆ. ಅಡೂರು ಬಳಿಕ ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಮಂಗಳೂರು ‌…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.