ಕಾಂಗ್ರೇಸ್ ಮುಖಂಡನ ಕೊಲೆ – ನಾಪತ್ತೆಯಾಗಿದ್ದ ಜೈನುಲ್ಲಾ ಖಾನ್ ಶವವಾಗಿ ಪತ್ತೆ…..

Suddi Sante Desk

ದಾವಣಗೆರೆ –

ನಾಪತ್ತೆಯಾಗಿದ್ದ ಕಾಂಗ್ರೆಸ್ ಪಕ್ಷದ ಮುಖಂಡ ನೊಬ್ಬ ಶವವಾಗಿ ಪತ್ತೆಯಾದ ಘಟನೆ ದಾವಣಗೇರಿ ಯಲ್ಲಿ ನಡೆದಿದೆ.ಜೈನುಲ್ಲಾಖಾನ್ ಖಾನ್ ಕಾಂಗ್ರೇಸ್ ಪಕ್ಷದ ಮುಖಂಡನಾಗಿದ್ದು ನಾಮತ್ತೆಯಾಗಿದ್ದು ಸಧ್ಯ ಕೊಲೆಯಾಗಿ ಪತ್ತೆಯಾಗಿದ್ದಾನೆ.ಕಳೆದ ವಾರದ ಹಿಂದೆ ನಾಪತ್ತೆ ಆಗಿದ್ದ ಕಾಂಗ್ರೆಸ್ ಮುಖಂಡ ಇಂದು ಶವವಾಗಿ ಪತ್ತೆಯಾಗಿದ್ದಾರೆ.ಬಸವಾಪಟ್ಟಣದ ಗುಡ್ಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ. ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿದ್ದರು ಒಂದು ವಾರದ ಹಿಂದೆ ನಾಪತ್ತೆ ನಾಪತ್ತೆ ಆಗಿದ್ದ ಕೈ ಮುಖಂಡ.

ಉದ್ದೇಶ ಪೂರ್ವಕವಾಗಿ ಅಪಹರಿಸಿ ಕೊಲೆಯನ್ನು ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿ ದ್ದಾರೆ.ಇನ್ನೂ ಸುದ್ದಿ ತಿಳಿದ ಪೊಲೀಸರು ಅದರಲ್ಲೂ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಪ್ರಮುಖವಾಗಿ ಬೆಸ್ಕಾಂ ಗುತ್ತಿಗೆದಾರನಾಗಿದ್ದನು ಜೈನುಲ್ಲಾ.ಬಸವಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.