ಬೆಂಗಳೂರು –
ಮಾಜಿ ಮುಖ್ಯಮಂತ್ರಿ ಆರ್ ಗುಂಡೂರಾವ ಹಾಗೂ ಕೆಪಿಸಿಸಿಯ ಮಾಜಿ ಅಧ್ಯಕ್ಷರಾದ ದಿನೇಶ ಗುಂಡೂರಾವ ಅವರ ತಾಯಿ ವರಲಕ್ಷ್ಮಿ ಗುಂಡೂರಾವ್ ಅವರು ನಿಧನರಾಗಿದ್ದಾರೆ. ವರಲಕ್ಷ್ಮಿ ಅವರು ಕೋವಿಡ್ ಸಂಬಂಧಿ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 72 ವರ್ಷದ ವರಲಕ್ಷ್ಮೀ ಅವರು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರು 1993 ರಲ್ಲಿ ರಕ್ತ ಕ್ಯಾನ್ಸರ್ನಿಂದ ನಿಧನರಾಗಿದ್ದರು.

ಸಂಬಂಧಿ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 72 ವರ್ಷದ ವರಲಕ್ಷ್ಮೀ ಅವರು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರು 1993 ರಲ್ಲಿ ರಕ್ತ ಕ್ಯಾನ್ಸರ್ನಿಂದ ನಿಧನರಾಗಿದ್ದರು. ಅವರ ನಿಧನದ ನಂತರ 1996 ರಲ್ಲಿ ವರಲಕ್ಷ್ಮಿ ಗುಂಡೂರಾವ್ ಕೂಡ ರಾಜಕೀಯಕ್ಕೆ ಬಂದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಅವರು ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಿ, ಬಿಜೆಪಿಯ ಅನಂತಕುಮಾರ್ ಎದುರು ಸೋಲು ಅನುಭವಿಸಿದ್ದರು. ವರಲಕ್ಷ್ಮಿ ಗುಂಡೂರಾವ್ ಅವರಿಗೆ ಮೂವರು ಪುತ್ರರಿದ್ದು ದಿನೇಶ್ ಗುಂಡೂರಾವ್, ಮಹೇಶ್ ಗುಂಡೂರಾವ್ ಮತ್ತು ರಾಜೇಶ್ ಗುಂಡೂರಾವ್ ಅವರನ್ನು ಸೇರಿದಂತೆ ಅಪಾರ ಬಂಧು ಬಳಗ ವನ್ನು ಬಿಟ್ಟು ಅಗಲಿದ್ದಾರೆ. ವರಲಕ್ಷ್ಮಿ ಅವರ ಅಂತ್ಯಕ್ರಿಯೆ ದೇವನಹಳ್ಳಿಯ ತೋಟದಲ್ಲಿ ಮಾಡಲಾಯಿತು.