ಚಿಕ್ಕಬಳ್ಳಾಪುರ –
ರಾಜ್ಯದ ದಾವಣಗೆರೆ,ವಿಜಯಪುರ,ಉಡುಪಿ, ಬೆಂಗಳೂರು ಗ್ರಾಮಾಂತರ,ಇತರೆ 9 ಜಿಲ್ಲೆಗಳಲ್ಲಿ ಖಾಸಗಿ ಮತ್ತು ಸರ್ಕಾರದ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು. ಚಿಕ್ಕ ಬಳ್ಳಾಪುರ ತಾಲೂಕಿನ ಅರೂರು ಸಮೀಪ ನೂತನವಾಗಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ಕಾಲೇಜು ಕಾಮಗಾರಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂ ದಿಗೆ ಮಾತನಾಡಿದರು.
9 ಜಿಲ್ಲೆಗಳಲ್ಲಿಯೂ ಹೊಸದಾಗಿ ವೈದ್ಯಕೀಯ ಕಾಲೇಜು ಕಟ್ಟಡಗಳನ್ನು ನಿರ್ಮಿಸಲಾಗುವುದು.ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ರಾಮನಗರ ಕಾಲೇಜು ನಿರ್ಮಾಣಕ್ಕೆ ಅನುದಾನ ನೀಡಲಿದೆ.ಚಿತ್ರದುರ್ಗ ಜಿಲ್ಲೆಗೆ ರಾಜ್ಯ ಸರ್ಕಾರ ಮತ್ತು ಡಿಎಂಎಫ್ ಟಿ ಹಣ ಬಳಕೆ ಮಾಡಿ ಕಾಲೇಜು ಕಟ್ಟಡ ನಿರ್ಮಿಸಲಾಗುವುದು ಎಂದರು.
2023ರ ಮಕರ ಸಂಕ್ರಾಂತಿ ವೇಳೆಗೆ ಚಿಕ್ಕಬಳ್ಳಾಪುರದ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ಪೂರ್ಣಗೊಳ್ಳ ಲಿದೆ.ಮುಂದಿನ ಮಾರ್ಚ್ ಒಳಗೆ ಕಾಲೇಜು ಉದ್ಘಾಟನೆ ನಡೆಯಲಿದೆ ಎಂದರು.
ಹಾವೇರಿ,ಯಾದಗಿರಿ,ಚಿಕ್ಕಮಗಳೂರಿನಲ್ಲಿಯೂ ವೈದ್ಯಕೀಯ ಕಾಲೇಜುಗಳ ಉದ್ಘಾಟನೆಗೆ ಕಾರ್ಯಕ್ರಮ ನಿಗದಿಪಡಿಸಲಿ ಸೂಚನೆ ನೀಡಲಾಗಿದೆ ಎಂದರು.
ಈಗಾಲೇ ಬೆಂಗಳೂರಿನ ಶಿವಾಜಿನಗರದಲ್ಲಿ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜನ್ನು ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದ ಅವಧಿ ಯಲ್ಲಿ ಉದ್ಘಾಟಿಸಲಾಗಿದೆ.ಶೀಘ್ರದಲ್ಲಿಯೇ ಉಳಿದ ಕಾಲೇಜುಗಳ ಉದ್ಘಾಟನೆಯನ್ನು ನೆರವೇರಿಸಲಾಗುವುದು ಎಂದರು.