ರಾಜ್ಯದ ಪ್ರಾಥಮಿಕ ಪ್ರೌಢ ಶಾಲೆ ಗಳಲ್ಲಿ ಕರ್ತವ್ಯ ಮಾಡುತ್ತಿರುವ ಗುತ್ತಿಗೆ ನೌಕರರಿಗೆ ಭಡ್ತಿ ಭಾಗ್ಯ ಪರಿಶೀಲನಾ ಸಮಿತಿಯ ಸಭೆಯಲ್ಲಿ ಸಿಕ್ಕಿತು ಅನುಮೋದನೆ…..

Suddi Sante Desk

ಬೆಂಗಳೂರು –

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಕಾಯಂ ಗೊಂಡ ಗುತ್ತಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆಆಧಾರದಲ್ಲಿ ನೇಮಕಗೊಂಡು ನಂತರ ಕಾಯಂಗೊಂಡಿರುವ 1983 ಶಿಕ್ಷಕರು,ಉಪನ್ಯಾಸಕರು ಹಾಗೂ ಪ್ರಾಂಶುಪಾಲರಿಗೆ ನೇಮಕದ ದಿನದಿಂದ ನಿಗದಿಯಾಗಿರುವ ವೇತನವನ್ನು ಯಥಾವತ್ತಾಗಿ ಮುಂದುವರೆಸುವ ಕುರಿತಂತೆ ಶಿಫಾರಸ್ಸು ಮಾಡಲಾಗಿದೆ.ಕಾಯಂಗೊಂಡ ಗುತ್ತಿಗೆ ನೌಕರರ ಕಾಲ ಮಿತಿ ಬಡ್ತಿ ಹಾಗೂ ಸ್ಥಗಿತ ವೇತನ ಬಡ್ತಿಯನ್ನು ಎಂದಿನಂತೆ ಮಂಜೂರು ಮಾಡಬೇಕು ಎಂದು ಪರಿಶೀಲನಾ ಸಮಿತಿ ಶಿಫಾರಸು ಮಾಡಿದೆ.

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ನಂತರ ಕಾಯಂ ಆಗಿರುವ ಬೋಧಕ ವರ್ಗದ ವೇತನ ಮತ್ತು ಪಿಂಚಣಿ ಪುನರ್ ನಿಗದಿಗಾಗಿ ಇಲಾಖೆಯು ರಚಿಸಿದ್ದ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರ ನೇತೃತ್ವದ ಪರಿಶೀಲನಾ ಸಮಿತಿಯು ಕಾಯಂಗೊಂಡ ಗುತ್ತಿಗೆ ನೌಕರರ ಬಡ್ತಿಗೆ ಶಿಫಾರಸು ಮಾಡಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.