ಸರ್ಕಾರಿ ಶಾಲೆಗಳ ನಕಲಿ ದಾಖಲೆ ಸೃಷ್ಟಿ ಹಾಲಿನ ಪುಡಿ ಗುಳಂ 14 ಶಾಲೆಗಳಿಗೆ ವಿತರಣೆ ಮಾಡಬೇಕಾಗಿದ್ದ ಹಾಲಿನ ಪೌಡರ್

Suddi Sante Desk

ರಾಯಚೂರು

ಸರ್ಕಾರಿ ಶಾಲೆಗೆ ಬರುವ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನ ಕಡಿಮೆ ಮಾಡಲು ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ.ಯೋಜನೆಯಂತೆ ಶಾಲೆಗೆ ಬರುವ ಬಡ ಮಕ್ಕಳಿಗೆ ಕೆಎಂಎಫ್ ನೀಡುವ ಕೆನೆಭರಿತ ಹಾಲು ವಿತರಣೆ ಮಾಡು ತ್ತಾರೆ.ಮಕ್ಕಳ ಹಾಲಿನ ಪುಡಿಯನ್ನು ಬಂಡವಾಳ ಮಾಡಿ ಕೊಂಡು ಶಾಲೆಗಳಿಗೆ ನೀಡದೆ ಗುಳಂ ಮಾಡಿದ ಜಾಲ ವೊಂದು ಪತ್ತೆಯಾಗಿದೆ ಹೌದು ಇಂತಹ ದೊಂದು ಜಾಲ ವೊಂದು ರಾಯಚೂರಿನಲ್ಲಿ ಕಂಡು ಬಂದಿದ್ದುಗುತ್ತಿಗೆದಾರ ಆಕಾಶ್ ಜಿಲ್ಲೆಯ ದೇವದುರ್ಗ ತಾಲೂಕಿನ ಒಟ್ಟು 14 ಶಾಲೆಗಳಿಗೆ ವಿತರಣೆ ಮಾಡಬೇಕಾದ 1,768 ಕೆಜಿ ಹಾಲಿನ ಪುಡಿ ಗುಳಂ ಮಾಡಿದ ಆರೋಪ ಕೇಳಿ ಬಂದಿದೆ

ಸುಮಾರು 5 ಲಕ್ಷ 10 ಸಾವಿರ 510 ರೂ. ಮೌಲ್ಯದ ಹಾಲಿನ ಪುಡಿ ನುಂಗಿದ ಗುತ್ತಿಗೆದಾರ ಆಕಾಶ್ ಎಂ.ಗಾಣಗಿ. ಶಾಲೆಗಳ ನಕಲಿ ಮೊಹರ ಮತ್ತು 14 ಶಾಲೆಗಳ ಮುಖ್ಯ ಗುರುಗಳ ನಕಲಿ ಸಹಿ ಮಾಡಿ ಹಾಲಿನ ಪುಡಿ ವಿತರಣೆ ಮಾಡಿರುವುದಾಗಿ ಶಿಕ್ಷಣ ಇಲಾಖೆಗೆ ಹಾಗೂ ಕೆಎಂಎಫ್ ಗೆ ದಾಖಲೆಗಳು ಕೂಡ ಸಲ್ಲಿಕೆ ಮಾಡಿದ್ದಾನೆ.ಇತ್ತ ಗುತ್ತಿಗೆದಾ ರನ ನಡೆ ಬಗ್ಗೆ ಅನುಮಾನ ಬಂದ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ಹಾಲಿನ ಪುಡಿ ಬಗ್ಗೆ ವಿಚಾರಣೆ ಮಾಡಿದಾಗ ಗುತ್ತಿಗೆದಾರ ಆಕಾಶ.ಎಂ.ಗಾಣಗಿಯ ನಿಜಬಣ್ಣ ಬಯಲಾಗಿದ್ದು ಸಧ್ಯ ಈ ಒಂದು ಕುರಿತು ಬಿಸಿ ಬಿಸಿ ಚರ್ಚೆ ಆಗುತ್ತಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.