ಶ್ರೀರಾಮ ಮಂದಿರ ನಿರ್ಮಾಣ ನಿಧಿ‌ ಸಮರ್ಪಣಾ ಅಭಿಯಾನಕ್ಕೆ ಕೈ ಜೊಡಿಸಿದ ಕ್ರಿಕೆಟ್ ದಿಗ್ಗಜರು

Suddi Sante Desk

ಬೆಂಗಳೂರು –

ಶ್ರೀರಾಮ ಮಂದಿರ ನಿರ್ಮಾಣ ನಿಧಿ‌ ಸಮರ್ಪಣಾ ಅಭಿಯಾನಕ್ಕೆ ನಾಡಿನ ಹಿರಿಯ ಕ್ರಿಕೆಟ್ ದಿಗ್ಗಜರು ಕೈ ಜೊಡಿಸಿದ್ದಾರೆ.

ಖ್ಯಾತ ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ರಾಮ ಮಂದಿರ ಅಭಿಯಾನಕ್ಕೆ ಸಂಪೂರ್ಣ ಬೆಂಬಲ ನೀಡಿ ನಿಧಿ ಅರ್ಪಣೆ ಮಾಡಿದ್ದಾರೆ.

ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ಖ್ಯಾತ ನಟಿ ಮತ್ತು ವಕೀಲರಾದ ಮಾಳವಿಕಾ ಅವಿನಾಶ್ ಅವರು ಖ್ಯಾತ ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್,ಸುನಿಲ್ ಜೋಶಿ,ವಿಜಯ ಭಾರದ್ವಾಜ್ ಹಾಗೂ ರಣಜಿ ಆಟಗಾರ ಅಖಿಲ್ ಅವರನ್ನು ಭೇಟಿಯಾಗಿ ನಿಧಿ ಸಂಗ್ರಹಿಸಿದರು.

ಈ ಸಮಯದಲ್ಲಿ ಮಾತನಾಡಿದ ವೆಂಕಟೇಶ್ ಪ್ರಸಾದ್ ಅವರು ತುಂಬಾ ಖುಷಿ ವ್ಯಕ್ತಪಡಿಸಿ ನಾನು ಈ ಅಭಿಯಾನಕ್ಕೆ ಜೋಡಿಸಿಕೊಳ್ಳುತ್ತೇನೆ ಎಂದರು. ರಾಮ ಮಂದಿರ ನಿರ್ಮಾಣ ದೇಶದ ನಿರ್ಮಾಣ ಅಂತ ಹೇಳಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.