ಬೈಕ್ ಅಪಘಾತ ರಸ್ತೆ ಪಕ್ಕದಲ್ಲಿ ತೀವ್ರವಾಗಿ ಗಾಯಗೊಂಡು ಬಿದ್ದ CRP – ಗಾಯಗೊಂಡು ಬಿದ್ದಿದ್ದ CRP ದೀಪಾ ಅವರನ್ನು ಆಸ್ಪತ್ರೆಗೆ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋದ ಶಾಸಕ ಹರತಾಳು ಹಾಲಪ್ಪ

Suddi Sante Desk

ಶಿವಮೊಗ್ಗ

ಶಾಲೆಯಿಂದ ಹರ್ ಘರ್ ಕಾರ್ಯಕ್ರಮ ಮುಗಿಸಿಕೊಂಡು ಹೊರಟಿದ್ದ ಮಹಿಳಾ CRP ಯೊಬ್ಬರು ಅಪಘಾತಕ್ಕಿಡಾಗಿ ರಸ್ತೆ ಪಕ್ಕದಲ್ಲಿ ಬಿದ್ದ ಘಟನೆ ಶಿವಮೊಗ್ಗ ದಲ್ಲಿ ನಡೆದಿದ್ದು ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ನೆವಟೂರು ಬಳಿ ಅಪಘಾ ತದಲ್ಲಿ ಗಾಯಗೊಂಡಿದ್ದ ಶಿಕ್ಷಕಿ ಸಿಅರ್ ಪಿ ಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಮೂಲಕ ಶಾಸಕ ಹರತಾಳು ಹಾಲಪ್ಪ ಮಾನವೀಯತೆ ಮೆರೆದಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅವರೊಂದಿಗೆ ಶಾಸಕ ಹರತಾಳು ಹಾಲಪ್ಪ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದರು.ಇದೇ ಮಾರ್ಗದಲ್ಲಿ ಸ್ಕೂಟಿ ಯಲ್ಲಿ ಹೋಗುತ್ತಿದ್ದ ಶಿಕ್ಷಕಿ ದೀಪಾ ಅಪಘಾತದಲ್ಲಿ ಗಾಯ ಗೊಂಡಿದ್ದಾರೆ.

ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿ ಶಿಕ್ಷಕಿ ದೀಪಾ ರಿಪ್ಪನ್ ಪೇಟೆಗೆ ಹೋಗುವಾಗ ನೆವಟೂರು ಬಳಿ ವಾಹನ ವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಶಿಕ್ಷಕಿ ಗಾಯಗೊಂಡಿರುವುದನ್ನು ಇದೇ ಮಾರ್ಗದಲ್ಲಿ ಬರುತ್ತಿದ್ದ ಶಾಸಕರು ಗಮನಿಸಿ ಸಹಾಯ ಮಾಡಿದ್ದಾರೆ. ತಮ್ಮ ಕಾರ್ ನಲ್ಲಿಯೇ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.