DCM ಲಕ್ಷ್ಮಣ ಸವದಿ ಮಗನ‌ ಕಾರು ಅಪಘಾತ ಒರ್ವ ಸಾವು…..

Suddi Sante Desk

ಬಾಗಲಕೋಟೆ –

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ರೈತನೊರ್ವ ಮೃತಪಟ್ಟ ಘಟನೆ ಬಾಗಲಕೋಟೆ ಯಲ್ಲಿ ನಡೆದಿದೆ. ಕೂಡಲ ಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ.

ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ 12 ಜನರು ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಹುನಗುಂದ ಪೊಲೀಸ್ ಠಾಣೆಯಲ್ಲಿ ಕೇಸು ದಾಖ ಲಾಗಿದೆ ಎನ್ನಲಾಗಿದೆ.

ಅಪಘಾತದ ನಂತರ ತಮ್ಮ ವಾಹನದ ನಂಬರ್ ಜಖಂಗೊಳಿಸಿ ಲಕ್ಷ್ಮಣ ಸವದಿ ಪುತ್ರ ಮತ್ತೊಂದು ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ಅವರನ್ನು ಹಿಡಿದು ಕೂರಿಸಿ ದ್ದಾರೆ.

ನಂತರ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಡಿಸಿಎಂ ಪುತ್ರನ ಬದಲು ಕಾರ್ ಚಾಲಕನ ವಿರುದ್ಧ ದೂರು ದಾಖಲಿಸಲಾಗಿ ದ್ದು ಸಧ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮಾಡತಾ ಇದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.