ಶಿಕ್ಷಕಿ ಗೀತಾ ಸಾವು ಮಗನ ಸಾವಿನ ಬಳಿಕ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನ – ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಶಿಕ್ಷಕಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಇನ್ನೊರ್ವ ಶಿಕ್ಷಕ

Suddi Sante Desk
ಶಿಕ್ಷಕಿ ಗೀತಾ ಸಾವು ಮಗನ ಸಾವಿನ ಬಳಿಕ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನ – ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಶಿಕ್ಷಕಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಇನ್ನೊರ್ವ ಶಿಕ್ಷಕ

ಗದಗ  –

ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಬಾಲಕನ ಕೊಲೆ ಪ್ರಕರಣ ದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಗೀತಾ ಬಾರಕೇರ್ ನಿಧನರಾಗಿದ್ದಾರೆ.

ನರಗುಂದ ತಾಲೂಕಿನ ಹದಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ  ಹುಚ್ಚಾಟದಿಂದಾಗಿ ಭರತ್ ವಿದ್ಯಾರ್ಥಿ ಶಾಲೆಯಲ್ಲಿಯೇ ಸಾವಿಗೀಡಾಗಿದ್ದನು.ಮಗನನ್ನು ಉಳಿಸಿಕೊಳ್ಳಲು ಮುಂದಾಗಿದ್ದ ಶಿಕ್ಷಕಿ ಗೀತಾ ಬಾರಕೇರ್ ಮತ್ತು ಇನ್ನೊರ್ವ ಶಿಕ್ಷಕ ಸಂಗನಗೌಡ ಪಾಟೀಲ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು.

 

 

ಚಿಕಿತ್ಸೆ ಫಲಿಸದೇ ಶಿಕ್ಷಕಿ ಗೀತಾ ಬಾರಕೇರ್ ನಿಧನರಾಗಿದ್ದಾರೆ.ಮಾರಣಾಂತಿಕ ಹಲ್ಲೆಗೊಳಗಾ ಗಿದ್ದ ಗೀತಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಕೊಲೆ ಆರೋಪಿ ಹದಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕ ನಾಗಿದ್ದ ಮುತ್ತಪ್ಪ ಹಡಗಲಿಯನ್ನು ಪೊಲೀಸರು ಈಗಾಗಲೇ ಬಂಧನ ಮಾಡಿದ್ದಾರೆ.

ಗೀತಾ ಬಾರಕೇರ್ ಕೂಡ ಇದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು ಗೀತಾ ಬಾರಕೇರ ಪುತ್ರ ಭರತ್​ ಬಾರಕೇರ ಅದೇ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಡಿಸೆಂಬರ್ 19ರಂದು ಶಾಲಾ ಆವರಣದಲ್ಲೇ ಬಾಲಕನನ್ನು ಕೊಂದು ಗೀತಾ ಬಾರಕೇರ ಮತ್ತು ಸಹ ಶಿಕ್ಷಕ ಸಂಗನಗೌಡ ಪಾಟೀಲ ಅವರ ಮೇಲೆ ಮಾರಣಾಂತಿಕ ಹಲ್ಲೆ ಯಾಗಿತ್ತು.

ಈ ಪ್ರಕರಣ ಕುರಿತಂತೆ ಸಧ್ಯ ನರಗುಂದ ಪೊಲೀಸರು ತನಿಖೆಯನ್ನು ಮಾಡುತ್ತಿದ್ದು ಕಳೆದ ಮೂರು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಗೀತಾ ಚಿಕಿತ್ಸೆ ಫಲಿಸಿದೆ ನಿಧನ ರಾಗಿದ್ದು ಇನ್ನೂ ಇತ್ತ ಸಂಗನಗೌಡ ಪಾಟೀಲ ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಸುದ್ದಿ ಸಂತೆ ನ್ಯೂಸ್ ನರಗುಂದ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.