ಸೆಪ್ಟೆಂಬರ್ 2 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ DC ಘೋಷಣೆ…..

Suddi Sante Desk

ಮಂಗಳೂರು

ಗಣಪತಿ ವಿಗ್ರಹದ ವಿಸರ್ಜನೆ ನೆಪದಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಸೆ.2 ರಂದು ಶಾಲಾ,ಕಾಲೇಜು ಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ ಹೀಗಾಗಿ ರಜೆಯನ್ನು ಘೋಷಣೆ ಮಾಡಲಾಗಿದೆ.

ಮಂಗಳೂರು ನಗರದ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ ಈ ಸಮಯದಲ್ಲಿ ಹಚ್ಚಿನ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಜಾಸ್ತಿಯಾಗುವ ಸಂಭವವಿರು ತ್ತದೆ.ಹೀಗಾಗಿ ಅಂಗನವಾಡಿ ಕೇಂದ್ರಗಳಿಗೆ,ಪ್ರಾಥಮಿಕ ಮತ್ತು ಪ್ರೌಢ ಶಾಲೆ,ಪದವಿ ಪೂರ್ವ ಸ್ನಾತಕೊತ್ತರ ಪದವಿ, ಡಿಪ್ಲೋಮಾ,ಐ.ಟಿ.ಐ ಸೇರಿದಂತೆ ಎಲ್ಲಾ ಸರ್ಕಾರಿ ಅನುದಾ ನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಸೆ 2 ರಂದು ರಜೆ ಯನ್ನು ಘೋಷಿಸಲಾಗಿದೆ.ಇನ್ನೂ ಜಿಲ್ಲಾಡಳಿತದ ರಜೆಯ ನಿರ್ಧಾರಕ್ಕೆ ನರೇಂದ್ರ ಮೋದಿ ಕಾರ್ಯಕ್ರಮದ ಕಾರಣಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ನೀಡಿದ್ರಾ ಎಂಬ ಮಾತು ವ್ಯಕ್ತವಾಗಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.