ಧಾರವಾಡ –
ಧಾರವಾಡ ಜಿಲ್ಲೆಯಲ್ಲಿ ಗಣೇಶೋತ್ಸವವನ್ನು ಗರಿಷ್ಠ 11 ದಿನಗಳವರೆಗೆ ಕೋವಿಡ್ ಮಾರ್ಗಸೂಚಿ ಗಳೊಂದಿಗೆ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾದಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಸೆ.5 ರಂದು ಹೊರಡಿಸಿದ್ದ ಮಾರ್ಗಸೂಚಿಗಳಲ್ಲಿ ಗರಿಷ್ಟ 5 ದಿನ ಗಣೇಶೋತ್ಸವ ಆಚರಿಸಲು
ಅವಕಾಶ ನೀಡಲಾಗಿತ್ತು.ಪರಿಷ್ಕೃತ ಆದೇಶದಲ್ಲಿ ಈ ನಿಯಮ ಸಡಿಲಿಸಿ ಜಿಲ್ಲೆಯಲ್ಲಿ ಈ ಹಿಂದೆ ಸಾಂಪ್ರ ದಾಯಿಕವಾಗಿ 11 ದಿನಗಳವರೆಗೆ ಗಣೇಶೋತ್ಸವ ಆಚರಿಸುತ್ತಿದ್ದವರಿಗೆ ಈ ಬಾರಿಯೂ ಗರಿಷ್ಟ 11 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗಿದೆ ಎಂದಿದ್ದಾರೆ
ಆಚರಣೆ ವೇಳೆ ಕೋವಿಡ್-19 ರ ಎಲ್ಲಾ ಮಾರ್ಗ ಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸ ಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿ ಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.