ಸ್ಕೂಟರ್ ಲ್ಯಾಪ್ ಟಾಪ್ ಮೊಬೈಲ್ ಪೊನ್ ಕಳ್ಳನ ಬಂಧನ ಧಾರವಾಡ ವಿದ್ಯಾಗಿರಿ ಪೊಲೀಸರ ಕಾರ್ಯಾಚರಣೆ

Suddi Sante Desk


ಧಾರವಾಡ –


ಧಾರವಾಡದ ವಿದ್ಯಾಗಿರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ. ಮೊಬೈಲ್, ಲ್ಯಾಪ್ ಟಾಪ್ ,ಸ್ಕೂಟರ್ ಹೀಗೆ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ವಿದ್ಯಾಗಿರಿ ಪೊಲೀಸರು ಬಂಧಿಸಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶ ನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿದ್ಯಾಗಿರಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಹಾಂತೇಶ ಬಸಾಪೂರ ಪಿಎಸ್ ಐ ಸಚಿನಕುಮಾರ ದಾಸರಡ್ಡಿ ನೇತ್ರತ್ವದಲ್ಲಿ ನಡೆದ ಈ ಒಂದು ಕಾರ್ಯಾಚರಣೆ ಯಲ್ಲಿ ಒರ್ವ ಆರೋಪಿಯನ್ನು ಬಂಧನ ಮಾಡಲಾಗಿದೆ.

ಹುಸೇನ ಅಬ್ದುಲಗಫಾರ್ ಶೇಖ್ ಧಾರವಾಡದ ಜನ್ನತ್ ನಗರದ ನಿವಾಸಿಯಾಗಿದ್ದು ಬಂಧಿತ ಕಳ್ಳ ನಾಗಿದ್ದಾನೆ. ಬಂಧಿತನಿಂದ ಒಂದು ಆಕ್ಟಿವಾ ಸ್ಕೂಟಿ,16 ಬೇರೆ ಬೇರೆ ಕಂಪನಿಯ ಮೊಬೈಲ್ ಮತ್ತು ಒಂದು ಲ್ಯಾಪ್ ಟಾಪ್ ನ್ನು ವಶಪಡಿಸಿ ಕೊಂಡಿದ್ದಾರೆ.

ಅಧಿಕಾರಿಗಳೊಂದಿಗೆ ಠಾಣೆಯ ಸಿಬ್ಬಂದಿಗಳು ಈ ಒಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.