ಆಗಸ್ಟ್ 10 ರಂದು ರಾಜ್ಯದ ಶಾಲಾ ಕಾಲೇಜು ವಿದ್ಯಾರ್ಥಿ ಗಳಿಗೆ ಮಾತ್ರೆ ವಿತರಣೆ – ಜಂತುಹುಳು ನಾಶಕ ಮಾತ್ರೆ ವಿತರಣೆಗೆ ಸೂಚನೆ…..

Suddi Sante Desk

ಬೆಂಗಳೂರು –

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ನಿಮಿತ್ತ ಆಗಸ್ಟ್ 10ರಂದು ರಾಜ್ಯದ ಎಲ್ಲಾ ಶಾಲಾ – ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಉಚಿತ ಜಂತುಹುಳು ನಾಶಕ ಮಾತ್ರೆಗಳನ್ನು ವಿತರಿಸಲಾಗುತ್ತದೆ.

ಹೌದು ಜಂತು ಹುಳು ಸೋಂಕಿನಿಂದ ಮಕ್ಕಳು ರಕ್ತ ಹೀನತೆ ಪೌಷ್ಟಿಕಾಂಶದ ಕೊರತೆ,ನಿಶ್ಯಕ್ತಿ, ಹಸಿವಾಗದಿರುವುದು, ಏಕಾಗ್ರತೆ ಕೊರತೆ,ಹೊಟ್ಟೆ ನೋವು,ವಾಕರಿಕೆ, ವಾಂತಿ, ಆತಂಕ,ಅತಿಸಾರ ಮೊದಲಾದ ಸಮಸ್ಯೆಗಳಿಂದ ಬಳಲು ತ್ತಾರೆ ಹೀಗಾಗಿ ಈ ಒಂದು ಮಾತ್ರೆಗಳನ್ನು ನೀಡಲಾಗುತ್ತದೆ

ಈ ಹಿನ್ನಲೆಯಲ್ಲಿ ಈ ಸಮಸ್ಯೆಯಿಂದ ಹೊರಬರುವ ಸಲುವಾಗಿ ಪ್ರತಿವರ್ಷ ಆಗಸ್ಟ್ 10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಆಚರಿಸಲಾಗುತ್ತಿದ್ದು, ಅಂದು ಅಲ್ಪೆಂಡಝೋಲ್ ಮಾತ್ರೆಯನ್ನು ಮಕ್ಕಳಿಗೆ ಉಚಿತವಾಗಿ ವಿತರಿಸಲಾಗುತ್ತದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.