ಬೆಂಗಳೂರು –
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ನಿಮಿತ್ತ ಆಗಸ್ಟ್ 10ರಂದು ರಾಜ್ಯದ ಎಲ್ಲಾ ಶಾಲಾ – ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಉಚಿತ ಜಂತುಹುಳು ನಾಶಕ ಮಾತ್ರೆಗಳನ್ನು ವಿತರಿಸಲಾಗುತ್ತದೆ.
ಹೌದು ಜಂತು ಹುಳು ಸೋಂಕಿನಿಂದ ಮಕ್ಕಳು ರಕ್ತ ಹೀನತೆ ಪೌಷ್ಟಿಕಾಂಶದ ಕೊರತೆ,ನಿಶ್ಯಕ್ತಿ, ಹಸಿವಾಗದಿರುವುದು, ಏಕಾಗ್ರತೆ ಕೊರತೆ,ಹೊಟ್ಟೆ ನೋವು,ವಾಕರಿಕೆ, ವಾಂತಿ, ಆತಂಕ,ಅತಿಸಾರ ಮೊದಲಾದ ಸಮಸ್ಯೆಗಳಿಂದ ಬಳಲು ತ್ತಾರೆ ಹೀಗಾಗಿ ಈ ಒಂದು ಮಾತ್ರೆಗಳನ್ನು ನೀಡಲಾಗುತ್ತದೆ
ಈ ಹಿನ್ನಲೆಯಲ್ಲಿ ಈ ಸಮಸ್ಯೆಯಿಂದ ಹೊರಬರುವ ಸಲುವಾಗಿ ಪ್ರತಿವರ್ಷ ಆಗಸ್ಟ್ 10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಆಚರಿಸಲಾಗುತ್ತಿದ್ದು, ಅಂದು ಅಲ್ಪೆಂಡಝೋಲ್ ಮಾತ್ರೆಯನ್ನು ಮಕ್ಕಳಿಗೆ ಉಚಿತವಾಗಿ ವಿತರಿಸಲಾಗುತ್ತದೆ.