ಬಿಸಿಯೂಟ ಕಳಪೆ ಗುಣಮಟ್ಟದ ಬೇಳೆಕಾಳುಗಳ ವಿತರಣೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆಗ್ರಹ – ಕಳಪೆ ಗುಣ ಮಟ್ಟದ ಬೇಳೆಕಾಳು ವಿತರಣೆ ಕಂಪನಿ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ…..

Suddi Sante Desk

ಬೆಂಗಳೂರು –

ಶಾಲಾ ಮಕ್ಕಳ ಬಿಸಿಯೂಟಕ್ಕೆ ಕಳಪೆ ಗುಣಮಟ್ಟದ ಬೇಳೆಕಾಳು ಸರಬರಾಜು ಮಾಡುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡು ತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಮಕ್ಕಳಿಗೆ ವಿಷವುಣಿಸುವ ಈ ಕುಕೃತ್ಯದಲ್ಲಿ ಆಹಾರ ನಿಗಮದ ಅಧಿಕಾರಿಗಳೇ ಶಾಮೀಲಾಗಿದ್ದರೂ ರಾಜ್ಯದ ಬಿಜೆಪಿ ಸರ್ಕಾರ ಕಣ್ಣುಮುಚ್ಚಿಕುಳಿತಿದೆ.ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಶ್ರೀರಂಗಪಟ್ಟಣ, ಮಂಡ್ಯ,ಮದ್ದೂರು,ದಾವಣಗೆರೆ,ಬಳ್ಳಾರಿಯಲ್ಲಿ ಕಳಪೆ ಬೇಳೆ ಪೂರೈಕೆಯ ದೂರುಗಳಿದ್ದರೂ ಆಹಾರ ನಿಗಮದ ಅಧಿಕಾರಿಗಳು ಕಳಪೆ ಬೇಳೆ ಸರಬರಾಜು ಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳದೆ ಇರುವುದಕ್ಕೆ ಏನು ಕಾರಣ? ಲಂಚದ ಹಣದಲ್ಲಿ ಯಾರೆಲ್ಲ ಪಾಲುದಾರರು? ಎಂದು ಅವರು ಪ್ರಶ್ನಿಸಿದ್ದಾರೆ.

ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಗಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಕ್ಷೀರಭಾಗ್ಯ ಯೋಜನೆಯನ್ನು ಸ್ಥಗಿತಗೊಳಿ ಸಿದ್ದ ಸರ್ಕಾರ,ಮೊಟ್ಟೆ ಖರೀದಿಯಲ್ಲಿಯೂ ಕಮಿಷನ್ ನುಂಗಿದ ಆರೋಪ ಕೇಳಿ ಬಂದಿತ್ತು.ಈಗ ಮಕ್ಕಳ ಅನ್ನದ ತಟ್ಟೆಗೆ ಕೈ ಹಾಕಿದೆ.ಈ ಸಚಿವರು,ಅಧಿಕಾರಿಗಳು ಹೊಟ್ಟೆಗೆ ಏನು ತಿನ್ನುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ

ಇನ್ನೂ ಕಳಪೆ ಗುಣಮಟ್ಟದ ಬೇಳೆ ಸರಬರಾಜು ಮಾಡುತ್ತಿ ರುವ ಕಂಪನಿಗಳನ್ನು ತಕ್ಷಣ ಬ್ಲಾಕ್ ಲೀಸ್ಟ್ ಗೆ ಸೇರಿಸಬೇಕು ಮತ್ತು ಕಂಪನಿಗಳ ಜೊತೆ ಶಾಮೀಲಾಗಿ ಭ್ರಷ್ಟಾಚಾರ ಎಸಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.