ಧಾರವಾಡದ ಡಾ.ಗಂಗೂಬಾಯಿ ಹಾನಗಲ್ ಹುಟ್ಟಿದ
ಗಂಗೋತ್ರಿ ನಿವಾಸಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ ಪರಿಶೀಲನೆ

Suddi Sante Desk

ಧಾರವಾಡ –

ಗಾನ ಕೋಗಿಲೆ, ಪದ್ಮವಿಭೂಷಣ ಡಾ.ಗಂಗೂಬಾಯಿ ಹಾನಗಲ್ ಅವರು ಹುಟ್ಟಿದ ಮನೆ ಹೊಸಾಯಲ್ಲಾಪುರದ ಗಂಗೋತ್ರಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ ನೀಡಿ ಪರಿಶೀಲನೆ ಮಾಡಿದರು

ಸಾರ್ವಜನಿಕರೊಂದಿಗೆ ಚರ್ಚಿಸಿ ಮಾಹಿತಿ ಪಡೆದ ಅವರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿಗಳೊಂದಿಗೆ ಡಾ.ಗಂಗೂಬಾಯಿ ಹಾನಗಲ್ ಅವರು ಹುಟ್ಟಿದ ಮನೆ ಗಂಗೋತ್ರಿ ಪುನರ್ ನಿರ್ಮಾಣ ಮತ್ತು ಮೂಲಸೌಕರ್ಯಗಳ ಪೂರೈಕೆ ಬಗ್ಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಧಾರವಾಡದ ಕೀರ್ತಿಯನ್ನು ವಿಶ್ವಮಟ್ಟಕ್ಜೆ ಎತ್ತರಿಸಿದ ಮಹತ್ವದ ವ್ಯಕ್ತಿಗಳ ಕುರಿತು ಲಭ್ಯವಿರುವ ಎಲ್ಲ ವಸ್ತು, ದಾಖಲೆ ಹಾಗೂ ಸ್ಥಳಗಳನ್ನು ಸಂರಕ್ಷಿಸಿ ಐತಿಹಾಸಿಕತೆಯ ನ್ನು ಕಾಪಾಡಲು ಜಿಲ್ಲಾಡಳಿತ ಅಗತ್ಯ ಕ್ರಮವಹಿಸಲಿದೆ. ವಿವಿಧ ಇಲಾಖೆಗಳಲ್ಲಿ ಈ ಕುರಿತು ಕಾರ್ಯಕೈಗೊಳ್ಳಲು ಲಭ್ಯವಿರುವ ಅನುದಾನವನ್ಬು ಬಳಸಿಕೊಂಡು ಕಾಮಗಾರಿ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು

ಈ ಸಂದರ್ಭದಲ್ಲಿ ಸಂಜೀವ ಲಕಮನಹಳ್ಳಿ,ಉದಯ ಯಂಡಿಗೇರಿ,ಶಂಕರ ಕುಂಬಿ,ಮಹಾಂತೇಶ ಲಿಂಬಣ್ಣದೇ ವರಮಠ,ಅಣ್ಣಪ್ಪ ಪಾಲನಕರ ಸೇರಿದಂತೆ ಇತರರು ಸ್ಥಳದಲ್ಲಿದ್ದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.