ಕೋವಿಶಿಲ್ಡ್ ಲಸಿಕೆ ಪಡೆದ ಜಿಲ್ಲಾಧಿಕಾರಿ ನಿತೇಶ ಪಾಟೀಲ

Suddi Sante Desk

ಧಾರವಾಡ –

ಧಾರವಾಡ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ನಗರದ ಜಿಲ್ಲಾಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದರು‌. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಲಸಿಕೆ ಪಡೆಯಲು ನೋಂದಣಿ ಮಾಡಿಕೊಂಡಿದ್ದ 28750 ಆರೋಗ್ಯ ಕಾರ್ಯಕರ್ತರ ಪೈಕಿ ಇದುವರೆಗೆ 14191 ಜನ ಮೊದಲ ಡೋಸ್, 4156 ಜನ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.ಇದೀಗ ಮಹಾನಗರಪಾಲಿಕೆ, ಸ್ಥಳೀಯಸಂಸ್ಥೆಗಳು,ಕಂದಾಯ,ಗ್ರಾಮೀಣಾಭಿವೃದ್ಧಿ ಇಲಾಖೆಯ 8775 ಜನ ನೋಂದಣಿ ಮಾಡಿಕೊಂಡಿ ದ್ದಾರೆ.ಈವರೆಗೆ 3292 ಜನ ಅಂದರೆ ಶೇ.37.5 ರಷ್ಟು ಲಸಿಕೆ ಪಡೆದಿದ್ದಾರೆ.ಉಳಿದವರೂ ಕೂಡ ನಿಗದಿತ ದಿನಗಳಂದು ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆಯಬೇಕು ಎಂದರು.

ಈಗಾಗಲೇ ಲಸಿಕೆ ನೋಂದಣಿಯಾಗಿ ಅನೇಕ ಬಾರಿ ಎಸ್‍ಎಂಎಸ್ ಮತ್ತಿತರ ಮಾಹಿತಿ ಬಂದಿದ್ದರೂ ಕೂಡ ಲಸಿಕೆ ಪಡೆಯಲು ಸಾಧ್ಯವಾಗದಿರುವವರಿಗೆ ಫೆ.22,23 ಹಾಗೂ 24 ರಂದು ಮಾಪ್ ಅಪ್ ಅಭಿಯಾನದ ಮೂಲಕ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಈ ಮೂರು ದಿನಗಳಲ್ಲಿ ಅವರು ಯಾವುದೇ ಸಂದೇಶಗಳು ಬಾರದಿದ್ದರೂ ನೇರವಾಗಿ ಲಸಿಕಾ ಕೇಂದ್ರಕ್ಕೆ ತೆರಳಿ ಕೋವಿಶೀಲ್ಡ್ ಲಸಿಕೆ ಪಡೆಯಬಹುದು. ಕೊರೊನಾ ವೈರಾಣು ನಿರ್ಮೂಲನೆಯಾಗಿಲ್ಲ ,ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ನಿರ್ಲಕ್ಷಿಸದೇ ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಶವಂತ್ ಮದೀನಕರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಕೆ.ಮಾನಕರ್,ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ಎಸ್.ಎಂ.ಹೊನಕೇರಿ ಮತ್ತಿತರರು ಇದ್ದರು.


Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.