This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

Local News

ಉಪನೋಂದಣಾಧಿಕಾರಿಗಳ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ ಕಾರ್ಯನಿರ್ವಹಣೆ ಪರಿಶೀಲನೆ…..

WhatsApp Group Join Now
Telegram Group Join Now


ಧಾರವಾಡ –

ಧಾರವಾಡದ ವಿಧಾನಸೌಧದಲ್ಲಿರುವ ಉಪನೋಂದಣಾಧಿ ಕಾರಿಗಳ ಕಚೇರಿಗೆ ಜಿಲ್ಲಾಧಿಕಾರಿಗಳಾದ ನಿತೇಶ್ ಕೆ. ಪಾಟೀಲ ಆಕಸ್ಮಿಕವಾಗಿ ಭೇಟಿ ನೀಡಿ ಕಚೇರಿಯ ಕಾರ್ಯ ನಿರ್ವಹಣೆ ಪರಿಶೀಲಿಸಿ,ಸಾರ್ವಜನಿಕ ಸ್ನೇಹಿಯಾದ ವಾತಾವರಣ ನಿರ್ಮಿಸಲು ಸೂಚಿಸಿದರು. ಮಿನಿವಿಧಾನ ಸೌಧದ ನೆಲಮಹಡಿಯಲ್ಲಿ ನೋಂದಣಾಧಿಕಾರಿಗಳ ಕಚೇರಿಗೆ ಆಗಮಿಸಿ,ನೋಂದಣಿ ಸರದಿಯ ಟೋಕನ್ ಪಡೆದಿರುವ ಸಾರ್ವಜನಿಕರಿಗಾಗಿ ಕಲ್ಪಿಸಿರುವ ಆಸನ ವ್ಯವಸ್ಥೆಗಳನ್ನು ವೀಕ್ಷಿಸಿ,ಸ್ಥಳದಲ್ಲಿದ್ದ ಜನರೊಂದಿಗೆ ಮಾತ ನಾಡಿದರು

ಅವರು ಬಂದಿರುವ ಕಾರ್ಯದ ಕಾರಣ ಕಚೇರಿಯಿಂದ ಅವರಿಗೆ ದೊರೆತಿರುವ ಸ್ಪಂದನೆಯ ಕುರಿತು ಮಾಹಿತಿ ಪಡೆದರು.ಮೊದಲ ಮಹಡಿಯಲ್ಲಿರುವ ಕಚೇರಿಗೆ ಪ್ರವೇಶಿಸಿದ ಜಿಲ್ಲಾಧಿಕಾರಿಗಳು ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಅವರ ಕಾರ್ಯವಿಧಾನಗಳ ವಿವರ ಪಡೆದರು.ನೋಂದಣಿಗೆ ಆಗಮಿಸುವ ಸಾರ್ವಜನಿಕರು, ಜನಸಾಮಾನ್ಯರಿಗೆ ಸುಲಭವಾಗಿ,ಸರಳವಾಗಿ ಮಾರ್ಗ ದರ್ಶನ ನೀಡುವ ಏರ್ಪಾಡುಗಳನ್ನು ಮಾಡಬೇಕು. ನೋಂದಣಿಗೆ ಅಗತ್ಯವಿರುವ ದಾಖಲೆಗಳ ಮಾಹಿತಿಯ ಫಲಕಗಳನ್ನು ಅಲ್ಲಲ್ಲಿ ಅಳವಡಿಸಬೇಕು. ಸಾರ್ವಜನಿಕ ರಿಂದ ದಾಖಲೆಗಳನ್ನು ಸ್ವೀಕರಿಸಿ,ಪರಿಶೀಲಿಸುವ ಕೌಂಟ ರನ್ನು ಕಚೇರಿಯ ಕಿಟಕಿ ಬಳಿಯೇ ತೆರೆಯಬೇಕೆಂದು ಸೂಚಿಸಿದರು

ಸರದಿ ಅನುಸಾರ ಬರಲು ಅಲ್ಲಿಯೂ ಕ್ರಮವಾಗಿ ಟೋಕನ್‌ ಗಳನ್ನು ನೀಡಬೇಕು.ಬೆಳಿಗ್ಗೆ 9 ರಿಂದ ಸಂಜೆ 7 ರವರೆಗೆ ನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಿ ಸುತ್ತಿರುವ ಬಗ್ಗೆ ಸಾರ್ವಜನಿಕವಾಗಿ ಮಾಹಿತಿ ಒದಗಿಸಲು ಸೂಚಿಸಿದರು.ಎಲ್ಲಾ ದಾಖಲೆಗಳನ್ನು ಸಲ್ಲಿಸಿ ಮಾರ್ಟ್‌ ಗೇಜ್ ನೋಂದಣಿ ಕಾರ್ಯಕ್ಕೆ ಆಗಮಿಸಿದ್ದ ಬಸವರಾಜ ಕುಂದಗೋಳ ಎಂಬುವರ ದಾಖಲೆಗಳನ್ನು ತಮ್ಮ ಸಮ್ಮುಖ ದಲ್ಲಿಯೇ ಪರಿಶೀಲಿಸಲು ಸೂಚಿಸಿದ ಜಿಲ್ಲಾಧಿಕಾರಿಗಳು ಸ್ವತಃ ನೋಂದಣಿ ಟೋಕನ್ ವಿತರಿಸಿದ್ದು ವಿಶೇಷವಾಗಿತ್ತು. ನಿಯಮಿತವಾಗಿ ವಿವಿಧ ಇಲಾಖೆಗಳ ಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದ್ದು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ,ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ್,ಜಿಲ್ಲಾ ನೋಂದಣಾಧಿಕಾರಿ ಕೆ.ಅಶೋಕ,ತಹಸೀಲ್ದಾರ ಡಾ.ಸಂತೋಷಕುಮಾರ ಬಿರಾದಾರ ಉಪನೋಂದಣಾ ಧಿಕಾರಿ ಜಿ.ಐ.ಅರಮನಿ ಸೇರಿದಂತೆ ಹಲವರು ಉಪಸ್ಥಿತರಿ ದ್ದರು.


Google News

 

 

WhatsApp Group Join Now
Telegram Group Join Now
Suddi Sante Desk