This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಧಾರವಾಡ

ಧಾರವಾಡ ದಲ್ಲಿ ಆರಂಭ ಗೊಂಡ ಜಿಲ್ಲಾ ಪೊಲೀಸ್ ಕ್ರೀಡಾಕೂಟ ಗಳು ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯ ಎಂದರು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

WhatsApp Group Join Now
Telegram Group Join Now

ಧಾರವಾಡ –

ಪ್ರತಿದಿನವನ್ನು ಕ್ರಿಯಾಶೀಲವಾಗಿ ಕಳೆಯಲು ಹಾಗೂ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಡರಾಗಿಲು ಕ್ರೀಡೆ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಅವರು ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲಸ್ ಇಲಾಖೆ ಆಯೋಜಿಸಿದ್ದ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಪಾರಿವಾಳ ಮತ್ತು ಬಲೂನ್ ಹಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪೊಲೀಸ್ ವ್ಯವಸ್ಥೆಯಲ್ಲಿ ಪ್ರತಿನಿತ್ಯ ಒಂದಿಲ್ಲೊಂ ದು ಒತ್ತಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ಬಂದೊಬಸ್ತ, ಸಂಚಾರ ನಿಯಂತ್ರಣ,ರೌಂಡ್ಸ್ ಹೀಗೆ ಅತ್ಯಂತ ಬಿಜಿ ಶೆಡ್ಯೂಲ್ ಇರುವುದರಿಂದ ಕ್ರೀಡೆ ಸ್ವಲ್ಪಮಟ್ಟಿಗೆ ವಿಶ್ರಾಂತಿ, ಹುಮ್ಮಸ್ಸು, ಚೈತನ್ಯ ನೀಡುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಹತ್ತಾರು ಕಾರ್ಯಗಳನ್ನು ಮಾಡಬೇಕಿರುವುದ ರಿಂದ ಸಹಜವಾಗಿ ಒತ್ತಡದಲ್ಲಿರುತ್ತೇವೆ. ಯಾವು ದಾದರೂ ಒಂದು ಕ್ರೀಡೆಯಲ್ಲಿ ತೊಡಗಿಕೊಳ್ಳ ಬೇಕು. ಇದರಿಂದ ಒತ್ತಡ ಕಡಿಮೆ ಆಗುತ್ತದೆ. ಕೆಲಸ ದಲ್ಲಿ ಉಲ್ಲಾಸವಿರುತ್ತದೆ. ಸೋಲು, ಗೆಲುವುಗ ಳನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಿ, ಆನಂದಿಸಬೇಕೇಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿಸಿಆರ್‍ಬಿ ಡಿವೈಎಸ್‍ಪಿ ಚಂದ್ರಕಾಂತ ಪೂಜಾರಿ ಸ್ವಾಗತಿಸಿದರು. ಡಿಎಆರ್ ಡಿವೈಎಸ್‍ಪಿ ಜಿ.ಸಿ. ಶಿವಾನಂದ ಅವರು ವಂದಿಸಿದರು. ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ ಡಾ.ವೈ.ಪಿ. ಕಲ್ಲನಗೌಡರ ಮತ್ತು ಎ.ಸಿ ಅಲ್ಲಯ್ಯನಮಠ ಅವರು ಕಾರ್ಯಕ್ರಮ ನಿರೂಪಿಸಿದರು.ಡಿಎಆರ್ ಎಸಿಪಿ ಮಹಮ್ಮದ ಡಿ.ಮಸ್ತಾನ ಅವರು ಕ್ರೀಡಾಜ್ಯೋತಿ ತಂದರು. ಡಿಎಆರ್ ಆರ್.ಪಿ.ಐ ನಾಗರಾಜ ಪಾಟೀಲ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಪೊಲೀಸ್ ಕ್ರೀಡಾಕೂಟದಲ್ಲಿ  ಜಿಲ್ಲಾ ಪೊಲೀಸ್ ಇಲಾಖೆಯ ಎಲ್ಲಾ ಠಾಣಾ, ಕಚೇರಿ ಸಿಬ್ಬಂದಿಗಳು, ಅಧಿಕಾರಿಗಳು, ಡಿಎಆರ್ ಸೇರಿದಂತೆ ಸಿಐಡಿ ಮತ್ತಿತ್ತರ ವಿಶೇಷ ಘಟಕಗಳು, ಪೋಲೀಸ್ ಸಿಬ್ಬಂದಿ,ಮಹಿಳಾ ಪೋಲೀಸ್ ಸಿಬ್ಬಂದಿ, ಅಧಿಕಾರಿಗಳು ಭಾಗವಹಿಸಿದ್ದರು.

 

ಚಕ್ರವರ್ತಿ ಜೊತೆಗೆ ಮಂಜುನಾಥ ಬಡಿಗೇರ ಸರ್ವಿ ಸುದ್ದಿ ಸಂತೆ ನ್ಯೂಸ್ ಧಾರವಾಡ


Google News

 

 

WhatsApp Group Join Now
Telegram Group Join Now
Suddi Sante Desk