ಬೆಂಗಳೂರು –
ಸಂಕ್ರಾಂತಿ ಯೊಳಗಾಗಿ ನಿಗಮ ಮಂಡಳಿಗೆ ನೇಮಕ ಪೈನಲ್ ಗುಡ್ ನ್ಯೂಸ್ ನೀಡಿದ ಡಿಕೆ ಶಿವಕುಮಾರ್ ಹೌದು ನಿಗಮ ಮಂಡಳಿಗಳಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು. ಸಂಕ್ರಾಂತಿ ಒಳಗೆ ನೇಮಕ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯಕರ್ತರ ಪಟ್ಟಿ ಬಂದಿದೆ ಈ ಬಗ್ಗೆ ಚರ್ಚೆ ಮಾಡಲು 10ನೇ ತಾರೀಕು ಸಭೆ ಕರೆದಿದ್ದೇವೆ. ಬ್ಲಾಕ್ ಅಧ್ಯಕ್ಷರ ಜೊತೆಯೂ ಚರ್ಚೆ ಮಾಡಿ ಅಂತಿಮಗೊಳಿಸುತ್ತೇವೆ.ಪಟ್ಟಿಯನ್ನ ಪಕ್ಷದ ವರಿಷ್ಠರು ಒಪ್ಪಿಕೊಂಡಿದ್ದಾರೆ.ಸಂಕ್ರಾಂತಿಯೊಳಗೆ ಅಧ್ಯಕ್ಷರ ನೇಮಕ ಆಗುತ್ತದೆ ಎಂದರು.
ಇದರೊಂದಿಗೆ ನಿಗಮ ಮಂಡಳಿ ನೇಮಕ ದ ನಿರೀಕ್ಷೆಯಲ್ಲಿದ್ದವರಿಗೆ ಡಿಕೆಶಿ ಶುಭ ಸುದ್ದಿ ಯನ್ನು ಈ ಮೂಲಕ ನೀಡಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..