ಧಾರವಾಡ –
ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಕಾಂಗ್ರೇಸ್ ಪಕ್ಷದ ಸೇರ್ಪಡೆ ಕುರಿತಂತೆ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಗುದ್ದಿದ್ದಾರೆ.ಹೌದು ಕೆಲ ಮಾಧ್ಯಮಗಳಲ್ಲಿ ನಾನು ಭಾರತೀಯ ಜನತಾ ಪಕ್ಷವನ್ನು ತೊರೆಯುವುದಕ್ಕೆ ಚಿಂತನೆ ನಡೆಸಿದ್ದೇನೆ ಎಂಬ ಸುಳ್ಳು ಹಾಗೂ ಕಪೋ ಲಕಲ್ಪಿತ ಸುದ್ದಿ ವರದಿಯಾಗುತ್ತಿದೆ.
ಇದೊಂದು ಸತ್ಯಕ್ಕೆ ದೂರವಾದ ಹಾಗೂ ದುರುದ್ದೇಶ ಪೂರ್ವಕ ವರದಿ.ಸಾಮಾಜಿಕ ಜಾಲ ತಾಣಗಳಲ್ಲೂ ಇದೇ ಬಗೆಯ ಸುಳ್ಳು ಸಂದೇಶವನ್ನು ಹಬ್ಬಿಸುವ ಪ್ರಯತ್ನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ವಿಚಾರವನ್ನು ನಾನು ನಿರ್ಲಕ್ಷಿಸಬಹು ದಿತ್ತು.ಆದರೆ ಸುಳ್ಳುಗಳನ್ನೇ ನಿಜವೆಂದು ಪ್ರತಿಷ್ಠಾಪಿ ಸುವ ಕಾಲಘಟ್ಟದಲ್ಲಿ ನಾವಿದ್ದೇವೆ
ಹೀಗಾಗಿ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದೇನೆ.ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ಪರಿವಾರದ ಬಗೆಗಿನ ನನ್ನ ನಿಷ್ಠೆ ಅಚಲವಾಗಿದೆ. ನಾನು ಬಿಜೆಪಿ ತೊರೆಯುವ ಅಥವಾ ಅನ್ಯ ಪಕ್ಷ ಸೇರುವುದನ್ನು ಕಾಯಾ,ವಾಚಾ,ಮನಸಾ ಕಲ್ಪಿಸಲೂ ಸಾಧ್ಯವಿಲ್ಲ. ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಹಬ್ಬಿರುವ ವದಂತಿಗೆ ಯಾರೂ ಬೆಲೆ ಕೊಡ ಬಾರದು ಎಂದು ಈ ಮೂಲಕ ಪ್ರಾರ್ಥಿಸುತ್ತೇನೆ.
ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಕ್ಕೂ ನಾನು ಸಿದ್ಧತೆ ನಡೆಸಿದ್ದೇನೆ ಎಂದು ಗುಮ್ಮಿ ಎದುರಾ ಳಿಗಳಿಗೆ ಗುದ್ದಿದರು.