ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ ದೀಪಾ ಗೌರಿ- ಮುಖ್ಯಮಂತ್ರಿ ಭೇಟಿಯಾಗಿ ಒತ್ತಾಯಿಸಿದ್ದೇನು ಗೊತ್ತಾ…..

Suddi Sante Desk

ಹುಬ್ಬಳ್ಳಿ –

ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತಹ ಕರ್ನಾಟಕ ವಿಶ್ವವಿದ್ಯಾಲಯ ಧಾರವಾ ಡದಲ್ಲಿ, ಪ್ರತಿವರ್ಷ ಸುಮಾರು 105000 ವಿದ್ಯಾರ್ಥಿ ಗಳು ಪ್ರತಿವರ್ಷವೂ ಪದವಿ ಪ್ರಮಾಣ ಪತ್ರವನ್ನು ಪಡೆಯುತ್ತಿದ್ದಾರೆ.ಆದರೆ 2019 – 2020 ನೇ ವರ್ಷ ದಲ್ಲಿ ಪದವಿ ಮುಗಿಸಿದಂತ ಸುಮಾರು 2 ಲಕ್ಷ ವಿದ್ಯಾ ರ್ಥಿಗಳು ಯಾವುದೇ ರೀತಿಯ ಪ್ರಮಾಣ ಪತ್ರವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಇದರಿಂದ ಸುಮಾರು 2 ಲಕ್ಷ ವಿದ್ಯಾರ್ಥಿಗಳು ಒಳ್ಳೆಯ ಭವಿಷ್ಯ ನಿರ್ಮಾಣ ದ ಅವಕಾಶಗಳಿಂದ ವಂಚಿತರಾಗಿ, ಸಾಕಷ್ಟು ಪರ ದಾಡುವಂಥ ಪರಿಸ್ಥಿತಿ ಬಂದಿದೆ.ಈ ಒಂದು ವಿಚಾರ ಕುರಿತು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂ ದ ನಾಯಕಿ ದೀಪಾ ಗೌರಿ ಮುಖ್ಯ ಮಂತ್ರಿ ಭೇಟಿ ಯಾಗಿ ಮನವಿ ನೀಡಿದರು

ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಈ ಸಮಸ್ಯೆ ಇಲ್ಲ. ಕೇವಲ ಕರ್ನಾಟಕ ರಾಜ್ಯದಲ್ಲಿ ಮಾತ್ರ ಈ ಸಮಸ್ಯೆ ಇದ್ದು ನಮ್ಮ ಘನವೆತ್ತ ರಾಜ್ಯಪಾಲರು, ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸಮಯಾವಕಾಶ ನೀಡದಿರುವುದೆ ಇದಕ್ಕೆ ಮುಖ್ಯ ಕಾರಣ. ಈ ಬಗ್ಗೆ ದಯವಿಟ್ಟು ತಾವುಗಳು ಗಮನ ಹರಿಸಿ ಸುಮಾರು 2 ಲಕ್ಷ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ ಎಂಬುದು ನಮ್ಮ ಕಳಕಳಿಯ ಮನವಿ ಎಂದು ದೀಪಾ ಗೌರಿ ನೇತ್ರತ್ವದಲ್ಲಿ ಕಾಂಗ್ರೆಸ್ ಪಕ್ಷದದವರುಮುಖ್ಯಮಂತ್ರಿ ಬಳಿ ಮನವಿ ನೀಡಿದರು.ಹಾಗೂ ಈ ಕೂಡಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಯವರ ಮೇಲೆ ಕಾನೂನು ಕ್ರಮ ಕೈಕೊಂಡು ಬಂಧಿಸಬೇಕೆಂ ದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಮಹಿ ಳಾ ಕಾಂಗ್ರೆಸ್ ದಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಮಹಿಳಾ ಕಾಂಗ್ರೆಸ್ಸಿನ ಬ್ಲಾಕ್ ಅಧ್ಯಕ್ಷರುಗಳಾದ ಬಾಳಮ್ಮ ಜಂಗಿನವರ್, ಚೇತನ ಲಿಂಗದಾಳ್, ಸುಜನ್ ಕಾಕೆ, ಜ್ಯೋತಿ ವಾಲಿಕಾರ, ಲಕ್ಷ್ಮಿ ಗುತ್ತೆ, ಅಕ್ಕಮ್ಮ ಕಂಬಳಿ, ಪ್ರೀತಿ ಜೈನ ಮುಂತಾದವರು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.