7ನೇ ವೇತನ ಆಯೋಗ NPS ಜಾರಿಗೆ ವಿಚಾರದಲ್ಲಿ ಷಡಾಕ್ಷರಿ ಅವರ ಮಹತ್ವದ ಹೇಳಿಕೆ – ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರು ಹೇಳಿದ್ದೇನು ಗೊತ್ತಾ…..

Suddi Sante Desk
7ನೇ ವೇತನ ಆಯೋಗ NPS ಜಾರಿಗೆ ವಿಚಾರದಲ್ಲಿ ಷಡಾಕ್ಷರಿ ಅವರ ಮಹತ್ವದ ಹೇಳಿಕೆ – ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರು ಹೇಳಿದ್ದೇನು ಗೊತ್ತಾ…..

ಬೆಂಗಳೂರು

ರಾಜ್ಯ ಸರ್ಕಾರದ ಹೊಸ ಯೋಜನೆ ಗಳನ್ನು ಸರ್ಕಾರಿ ನೌಕರರು ಅಧಿಕಾರಿಗಳು ಅನುಷ್ಠಾನ ಗೊಳಿಸಿ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ ಅವರು

ಶಾಸಕರು,ಸಂಸದರು,ಜನಪ್ರತಿನಿಧಿಗಳಿಗೆ ರಾಜ್ಯ ಸರ್ಕಾರಿ ನೌಕರರು ಸಹಕಾರ ಕೊಡುವುದರ ಮೂಲಕ ಸರ್ಕಾರದ ಯೋಜನೆಗಳ ಯಶಸ್ಸಿನಲ್ಲಿ ನೌಕರರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ಪ್ರಾಮಾಣಿಕವಾಗಿ ಬದ್ಧತೆಯಿಂದ ಸಮಾಜದ ಕಟ್ಟಕಡೆಯ ಶ್ರೀಸಾಮಾನ್ಯನಿಗೆ ತಲುಪಿಸುವ ಕೆಲಸ ಮಾಡಿದಲ್ಲಿ ಸರ್ಕಾರದ ಯೋಜನೆ ಯಶಸ್ವಿಯಾಗಲಿದೆ ಎಂದರು

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಿ ನೌಕರರಿಗೂ ಅನುಕೂಲವಾಗಿದೆ ಇನ್ನೂ 7ನೇ ವೇತನ ಆಯೋಗ ಜಾರಿ ಹಾಗೂ ಎನ್‍ಪಿಎಸ್‍ ನಿಂದ ಒಪಿಎಸ್ ಮಾಡುವ ವಿಚಾರದಲ್ಲಿ ಅದನ್ನೂ ಸಹಾನುಭೂತಿಯಿಂದ ಪರಿಗಣಿಸಬೇಕು ಎಂದು ಮನವಿ ಮಾಡಿದರು

ಯಾವುದೇ ಹೋರಾಟವಿಲ್ಲದೇ ಅತ್ಯಂತ ಪ್ರೀತಿ, ವಿಶ್ವಾಸದಿಂದ ಮನಸ್ಸು ಗೆದ್ದು, ಎನ್‍ಪಿಎಸ್‍ನ್ನು ಒಪಿಎಸ್ ಮಾಡುವ ವಿಚಾರದಲ್ಲಿ ಸಹಕಾರ ನೀಡಬೇಕು.ರಾಜ್ಯದ 3 ಲಕ್ಷ ಎನ್‍ಪಿಎಸ್ ನೌಕರು ಇದ್ದಾರೆ.ಇದರಿಂದ ಅವರ ಕುಟುಂಬಕ್ಕೆ ಭದ್ರತೆ ಸಿಗಲಿದೆ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿ ವರ್ಷ ರಾಜ್ಯದಲ್ಲಿ 8 ಸಾವಿರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 250 ಮಕ್ಕಳಿಗೆ ತಲಾ 1 ಸಾವಿರ ನಗದು, ಸ್ಮರಣಿಕೆ ನೀಡಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ ಎಂದರು.

ಸುದ್ದಿ ಸಂತೆ ನ್ಯೂಸ್ ಚಿತ್ರದುರ್ಗ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.