ಬೆಂಗಳೂರು –
ಅಕ್ಟೋಬರ್ 25 ರಿಂದ ರಾಜ್ಯದಲ್ಲಿ ಮತ್ತೊಂದು ಹಂತದಲ್ಲಿ ಶಾಲೆ ಗಳು ಅಂದರೆ ಪ್ರಾಥಮಿಕ ಶಾಲೆಗಳು ಬಾಗಿಲು ತೆರೆ ಯಲಿದ್ದು ಎರಡು ವರ್ಷಗಳ ನಂತರ 1 ರಿಂದ 5 ನೇ ತರಗತಿ ಕ್ಲಾಸ್ ಗಳು ಪೂರ್ಣ ಪ್ರಮಾಣದೊಂದಿಗೆ ಆರಂಭ ವಾಗುತ್ತಿದ್ದು ಇದರೊಂದಿಗೆ ಬಿಸಿಯೂಟ ಕೂಡಾ ಆರಂಭ ವನ್ನು ಮಾಡಲಾಗುತ್ತಿದೆ
ಹೌದು ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ( School Education Department ) ನಿರ್ದೇಶಕರು ಅಧಿಕೃತ ಜ್ಞಾಪನೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 21-10-2021ರಿಂದ ಮಧ್ಯಾಹ್ನ ಉಪಹಾರ ಯೋಜನೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರದ ಮುಖ್ಯ ಕಚೇರಿ ಯಿಂದ ಸೂಚನೆ ನೀಡಿರುತ್ತಾರೆ. ಈ ಸಂಬಂಧ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ಕಾರ್ಯಕ್ರ ಮವನ್ನು ಆರಂಭಿಸಲು ಮುಂಜಾಗ್ರತಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸರ್ಕಾರಿ,ಅನುದಾನಿತ ಶಾಲಾ ಮುಖ್ಯ ಶಿಕ್ಷಕರುಗಳಿಗೆ ಈ ಕೆಳಕಂಡ ಸೂಚನೆ ನೀಡುವಂತೆ ತಿಳಿಸಲಾಗಿದೆ
- ಶಾಲೆಗಳಲ್ಲಿ ಅಡುಗೆಯನ್ನು ತಯಾರು ಮಾಡುವ ಆಹಾರ ಧಾನ್ಯಗಳ ದಾಸ್ತಾನು ಗಳನ್ನು ಪರಿಶೀಲಿಸಿಕೊಳ್ಳುವುದು.ಯಾವುದೇ ಅವಧಿ ಮೀರಿರುವ ಆಹಾರ ಧಾನ್ಯಗಳನ್ನು ಬಳಕೆ ಮಾಡದಂತೆ ಹಾಗೂ ಪರಿಶೀಲಿಸಿಕೊಳ್ಳುವುದು.
- ಶಾಲೆಗಳಲ್ಲಿ ಗ್ಯಾಸ್ ಸ್ಟೌವ್ ಮತ್ತು ಪಾತ್ರೆ ಪರಿಕರಗಳನ್ನು ದುರಸ್ತಿ ಹೊಂದಿದಲ್ಲಿ, ನಿಯಮಾನು ಸಾರ ಅಕ್ಷರ ದಾಸೋಹ ಕಾರ್ಯಕ್ರಮದ ಅನುದಾವನ್ನು ( ರೂ.5 ಸಾವಿರದಿಂದ 8 ಸಾವಿರದ ಒಳಗೆ ) ಬಳಕೆ ಮಾಡಿಕೊಂಡು ರಿಪೇರಿ ಮಾಡಿಸುವಂತೆ ತಿಳಿಸುವುದು.
- ದಿನಾಂಕ 21-10-2021ರೊಳಗೆ ಶಾಲೆಗಳಿಗೆ ಅಕ್ಕಿ ಮತ್ತು ಗೋಧಿಯು ಸರಬರಾಜಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಪಹಾರವನ್ನು ನೀಡಲು ಉಳಿದ ಆಹಾರ ಪದಾರ್ಥಗಳನ್ನು 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ರೂ.4.97ರಂತೆ ಹಾಗೂ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರೂ.7.45ರ ಪರಿವರ್ತನಾ ವೆಚ್ಚವನ್ನು ಒಳಸಿಕೊಂಡು ಅಡುಗೆ ತಯಾರಿಸುವಂತೆ ಸೂಚನೆ ನೀಡಿದೆ.
- ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಮುಖ್ಯ ಹಾಗೂ ಸಹಾಯಕ ಅಡುಗೆಯವರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆಯನ್ನು ದಿನಾಂಕ 21-10-2021ರೊಳಗೆ ಪಡೆದುಕೊಂಡು ಅಡುಗೆ ಕೇಂದ್ರಗಳಿಗೆ ಹಾಜರಾಗಲು ಸೂಚನೆ ನೀಡುವುದು.
ಈ ಎಲ್ಲಾ ಅಂಶಗಳನ್ನೊಳಗೊಂಡಂತೆ ದಿನಾಂಕ 21-10-2021ರಿಂದ ಮಧ್ಯಾಹ್ನದ ಉಪಹಾರವನ್ನು ವಿದ್ಯಾರ್ಥಿಗಳಿಗೆ ನೀಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು,ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲು ಕ್ಷೇತ್ರ ಶಿಕ್ಷಣಾಧಿ ಕಾರಿಗಳಿಗೆ ತಿಳಿಸಿದ್ದಾರೆ.