ಬೆಂಗಳೂರು –
ಯಾವುದೇ ವದಂತಿಗಳನ್ನು ನಂಬಬೇಡಿ ಹೋರಾಟ ನಡೆದೆ ನಡೆಯುತ್ತದೆ ಎಂದ ಷಡಾಕ್ಷರಿಯವರು – ಅನಿರ್ಧಿಷ್ಟಾವಧಿ ಮುಷ್ಕರ ವನ್ನು ಹಿಂದಕ್ಕೆ ಪಡೆಯುವ ಮಾತೇ ಇಲ್ಲ ಎನ್ನುತ್ತಾ ರಾಜ್ಯ ಸರ್ಕಾರದ ವಿರುದ್ದ ಸಿಡಿದೆದ್ದ ಸರ್ಕಾರಿ ನೌಕರರು
7ನೇ ವೇತನ ಆಯೋಗ ಜಾರಿಗೆ ಇದರೊಂದಿಗೆ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಒತ್ತಾಯಿಸಿ ಮಾರ್ಚ್ 1 ರಿಂದ ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರ ಹೋರಾಟ ನಡೆಯಲಿದೆ.ಈ ಎರಡು ಬೇಡಿಕೆಗಳನ್ನು ಈಡೇರಿಸುವ ಕುರಿತು ಸರ್ಕಾರದಿಂದ ಲಿಖಿತ ಆದೇಶ ಹೊರಬೀಳದೇ ಇರುವುದರಿಂದ ಬುಧವಾರದಿಂದ ನಡೆಸಲುದ್ದೇಶಿ ಸಿರುವ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಿಂದಕ್ಕೆ ಪಡೆಯುವ ಮಾತೇ ಇಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಹೇಳಿ ದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಎಲ್ಲಾ ನೌಕರರು ಒಗ್ಗಟ್ಟಾಗಿ ಈ ಹೋರಾಟ ನಡೆಸುತ್ತೇವೆ ಅಧಿಕಾರಿ ವರ್ಗದವರು,ಎಲ್ಲಾ ವೃಂದಗಳ ನೌಕರರು ಈ ಹೋರಾಟದಲ್ಲಿ ಭಾಗವಹಿಸಬೇಕು ಆ ಮೂಲಕ ಈ ಮುಷ್ಕರವನ್ನು ಯಶಸ್ವಿಯಾಗಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸೋಣ ಎಂದು ಅವರ ಸರ್ಕಾರಿ ನೌಕರರಲ್ಲಿ ಮನವಿ ಮಾಡಿದರು.
ಇನ್ನೂ ನಮ್ಮ ಬೇಡಿಕೆಗಳನ್ನು ಈಡೇರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ.ನಮ್ಮೊಂದಿಗೂ ಚರ್ಚೆ, ಮಾತು ಕತೆಗಳನ್ನು ನಡೆಸಲಾಗುತ್ತಿದೆ.ಆದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಆದೇಶ ಹೊರಡಿಸುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ.ಈ ಬಗ್ಗೆ ಹರ ಡುವ ಯಾವುದೇ ವದಂತಿಗಳನ್ನು ಸರ್ಕಾರಿ ನೌಕರರು ನಂಬಬಾರದು ಎಂದರು.
ಮುಷ್ಕರವನ್ನು ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.ನಾವು ಒಗ್ಗಟ್ಟಾಗಿ ಹೋರಾಟ ನಡೆಸುತ್ತಿದ್ದು ನಮ್ಮ ಪ್ರಮುಖ ಎರಡೂ ಬೇಡಿಕೆಗಳು ಈಡೇರುವವ ರೆಗೂ ಹೋರಾಟ ನಡೆಸುತ್ತೇವೆ ಎಂದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..