ಪಾಲಿಕೆಗೆ ಡಾ ಈಶ್ವರ ಉಳ್ಳಾಗಡ್ಡಿ ಆಯುಕ್ತರಾಗಿ ಬಂದ ನಂತರ ಸಾಕಷ್ಟು ಕೆಲಸ ಕಾರ್ಯ ಮಾಡಿದ್ದಾರೆ ರಾಜು ನಾಯಕವಾಡಿ – ವೈಯಕ್ತಿಕ ಪ್ರತಿಷ್ಠೆಗಾಗಿ ಆಯುಕ್ತರ ವರ್ಗಾವಣೆ ಕೂಗು ಸರಿಯಲ್ಲ ಎಂದ ಯುವ ಮುಖಂಡ…..

Suddi Sante Desk
ಪಾಲಿಕೆಗೆ ಡಾ ಈಶ್ವರ ಉಳ್ಳಾಗಡ್ಡಿ ಆಯುಕ್ತರಾಗಿ ಬಂದ ನಂತರ ಸಾಕಷ್ಟು ಕೆಲಸ ಕಾರ್ಯ ಮಾಡಿದ್ದಾರೆ ರಾಜು ನಾಯಕವಾಡಿ – ವೈಯಕ್ತಿಕ ಪ್ರತಿಷ್ಠೆಗಾಗಿ ಆಯುಕ್ತರ ವರ್ಗಾವಣೆ ಕೂಗು ಸರಿಯಲ್ಲ ಎಂದ ಯುವ ಮುಖಂಡ…..

ಹುಬ್ಬಳ್ಳಿ

ವೈಯಕ್ತಿಕ ಪ್ರತಿಷ್ಠೆಗಾಗಿ ಪಾಲಿಕೆಯ ಆಯುಕ್ತರನ್ನು ವರ್ಗಾವಣೆ ಮಾಡುವಂತೆ ಒತ್ತಾಯ ಮಾಡುತ್ತಿರುವುದು ಸರಿಯಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಹೋರಾಟಗಾರ ರಾಜು ನಾಯಕವಾಡಿ ಹೇಳಿದ್ದಾರೆ. ಪಾಲಿಕೆಯ ಆಯುಕ್ತರ‌ನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿ ಅವರಿಗೆ ಮಹಾನಗರ ಪಾಲಿಕೆಯ ಒಬ್ಬರು ಸದಸ್ಯರು ಪತ್ರ ಬರೆದಿರುವ ವಿಚಾರ ವನ್ನು ಖಂಡಿಸಿದರು.

ಯಾವುದೇ ಕಾರಣಕ್ಕೂ ಪಾಲಿಕೆ ಆಯುಕ್ತರ ವರ್ಗಾವಣೆ ಬೇಡ ಎಂದು ರಾಜು ನಾಯಕವಾಡಿ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹ ವನ್ನು ಮಾಡಿದರು.ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರನ್ನು ನಿಯುಕ್ತಿಗೊಳಿಸುವಂತೆ ವಾರ್ಡ್ ನಂಬರ್ 53ರ ಪಾಲಿಕೆ ಸದಸ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಸರಿಯಲ್ಲ,

ಈಶ್ವರ ಉಳ್ಳಾಗಡ್ಡಿ ಅವರು ಇತ್ತೀಚಿಗೆ ಬಂದವರು ಉತ್ತಮ ಕೆಲಸ ಮಾಡುತಿದ್ದಾರೆ.ಪಾಲಿಕೆಗೆ ಈಶ್ವರ ಉಳ್ಳಾಗಡ್ಡಿ ಅವರು ವರ್ಗಾವಣೆ ಆಗಿ ಬಂದ ನಂತರ ಸಾಕಷ್ಟು ಕೆಲಸ ಮಾಡುತಿದ್ದಾರೆ.ಯಾರೂ ತಮ್ಮ ವೈಯಕ್ತಿಕ ಪ್ರತಿಷ್ಠೆಗಾಗಿ ಒಳ್ಳೆಯ ಅಧಿಕಾರಿ ಗಳನ್ನ ವರ್ಗಾವಣೆ ಮಾಡುವುದು ಸರಿಯಲ್ಲ, ಅನಗತ್ಯವಾಗಿ ಅವರ ಬಗ್ಗೆ ಮಾತನಾಡುವುದು ಸರಿಯಲ್ಲ,

ಒಂದು ವೇಳೆ ಸರಕಾರ ಅಥವಾ ಹಿರಿಯ ಅಧಿಕಾರಿಗಳು ವರ್ಗಾವಣೆಗೆ ಮುಂದಾದರೆ ಉಗ್ರ ಸ್ವರೂಪದ ಹೋರಾಟದ ಎಚ್ಚರಿಕೆ ಯನ್ನು ನೀಡಿದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.