ಮುಂದುವರಿದ ಮಳೆಯ ಅಬ್ಬರ ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ – ದಾವಣಗೆರೆ,ಮಂಡ್ಯ ಶಿವಮೊಗ್ಗ ಜಿಲ್ಲೆಯಲ್ಲಿ ರಜೆ ಘೋಷಣೆ….

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ.ಹೌದು ಕಳೆದ ಎರಡು ದಿನಗಳಿಂದ ಮಳೆರಾಯ ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬೆರೆಯುತ್ತಿದ್ದು ಮುಂಜಾಗ್ರತೆಯ ಹಿನ್ನೆಲೆಯಲ್ಲಿ ಇಂದು ರಾಜ್ಯದ ಹಲವು ಜಿಲ್ಲೆಯಲ್ಲಿ ಮೇ 20 ಶುಕ್ರವಾರ ಸಹ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಹೌದು ಶಿವಮೊಗ್ಗದಲ್ಲಿ ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಾದ್ಯಂತ ನಾಳೆಯೂ ಸಹ ರಜೆ ಯನ್ನು ಘೋಷಿಸಲಾಗಿದೆ ಜಿಲ್ಲಾಧಿಕಾರಿ ಶಾಲೆಗಳಿಗೆ ರಜೆ ನೀಡಿದ್ದಾರೆ

ಜಿಲ್ಲೆಯಾದ್ಯಂತ ಮಳೆ ಎಡೆಬಿಡದೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ,ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.20 ರ ಶುಕ್ರವಾರ ಸಹ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶಿಸಿದ್ದಾರೆ.ಇತ್ತ ದಾವಣಗೆರೆ ಮತ್ತು ಮಂಡ್ಯ ಜಿಲ್ಲೆ ಯಲ್ಲೂ ಕೂಡಾ ಜಿಲ್ಲಾಧಿಕಾರಿ ಗಳು ರಜೆಯನ್ನು ನೀಡಿ ಆದೇಶವನ್ನು ಮಾಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.