ಹಾಸನ –
ಹೊಳೆನರಸೀಪುರದಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶೋಕ್ ರವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿದ್ದ ಅಶೋಕ್ (54) ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆ ಯಲ್ಲೇ ಕೊನೆಯುಸಿರೆಳೆದಿದ್ದಾರೆ.
2022 ರಲ್ಲಿ ರಾಷ್ಟ್ರಪತಿ ಪದಕ, 2023 ರಲ್ಲಿ ಕೇಂದ್ರ ಗೃಹಸಚಿವರ ಪದಕಕ್ಕೆ ಭಾಜನರಾಗಿದ್ದ ಅಶೋಕ್ ರವರು ಮೂಲತಃ ಶಿವಮೊಗ್ಗ ಜಿಲ್ಲೆ ಭದ್ರಾವತಿಯವರು.
ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಶೋಕ್ ರವರು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬೆಂಗಳೂರಿ ನಲ್ಲಿ ನಡೆಯಿತು.ಡಿವೈಎಸ್ಪಿ ಅಶೋಕ್ ರವರ ನಿಧನಕ್ಕೆ ಎಸ್ಪಿ ಮಹಮ್ಮದ್ ಸುಜೀತಾ ಅವರು ಸಂತಾಪ ಸೂಚಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹಾಸನ…..