DYSP ಸುಮಿತ್‌ ಅಮಾನತು – ಇಬ್ಬರು ಅಧಿಕಾರಿಗಳು ತಲೆದಂಡ…..

Suddi Sante Desk
DYSP ಸುಮಿತ್‌ ಅಮಾನತು – ಇಬ್ಬರು ಅಧಿಕಾರಿಗಳು ತಲೆದಂಡ…..

ಮಂಡ್ಯ

ಕರ್ತವ್ಯದ ಲೋಪದ ಹಿನ್ನೆಲೆಯಲ್ಲಿ ಡಿವೈಎಸ್ಪಿ ರೊಬ್ಬರನ್ನು ಅಮಾನತು ಮಾಡಿದ ಘಟನೆ ಮಂಡ್ಯ ದಲ್ಲಿ ನಡೆದಿದೆ.ಹೌದು ನಾಗಮಂಗಲದಲ್ಲಿ ಈಚೆಗೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಸುಮಿತ್‌ ಎ.ಆರ್‌. ಅವರನ್ನು ಅಮಾನತು ಮಾಡಲಾಗಿದೆ.

ಮಂಡ್ಯ ಸಿ.ಇ.ಎನ್‌ ಪೊಲೀಸ್‌ ಠಾಣೆಯ ಡಿವೈಎಸ್ಪಿ ಶಿವಮೂರ್ತಿ ಜಿ.ಆರ್‌.ಅವರಿಗೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಸಧ್ಯ ನೀಡಲಾಗಿದೆ.ಈ ಒಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಗಲಭೆಗೆ ಸಂಬಂಧಿಸಿದಂತೆ ಈಚೆಗೆ ನಾಗಮಂಗಲ ಪಟ್ಟಣ ಠಾಣೆ ಇನ್‌ಸ್ಪೆಕ್ಟರ್‌ ಅಶೋಕ್‌ ಕುಮಾರ್‌ ಅವರನ್ನು ಈ ಮೊದಲು ಅಮಾನತು ಮಾಡಲಾ ಗಿದ್ದು ಸಧ್ಯ ಇದೇ ಒಂದು ಪ್ರಕರಣದಲ್ಲಿ ಮತ್ತೋರ್ವ ಅಧಿಕಾರಿಯನ್ನು ಅಮಾನತು ಮಾಡಿದೆ

ಸುದ್ದಿ ಸಂತೆ ನ್ಯೂಸ್ ಮಂಡ್ಯ……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.