ಶಾಲಾ ಕಾಲೇಜುಗಳಲ್ಲಿನ ಸಮವಸ್ತ್ರ ಕುರಿತು ಮಾಹಿತಿ ಸಂಗ್ರಹಿಸಲು ಶಿಕ್ಷಣ ಇಲಾಖೆ ಸೂಚನೆ – ಸಮಗ್ರ ಅಧ್ಯಯನ ಮಾಡಿ ವರದಿ ನೀಡಲು ಸೂಚನೆ…..

Suddi Sante Desk

ಬೆಂಗಳೂರು –

ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿರುವ ಪ್ರಕರಣದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಹಿಜಾಬ್‌ ಧರಿಸುವುದು ಮತ್ತು ವಸ್ತ್ರ ಸಂಹಿತೆ (ಕಾಲೇಜುಗಳಲ್ಲಿನ ಡ್ರೆಸ್‌ಕೋಡ್‌) ಕುರಿತು ಇತರ ರಾಜ್ಯಗಳಲ್ಲಿರುವ ನಿಯಮಗಳನ್ನು ಸಂಗ್ರಹಿಸುವ ಕಾರ್ಯಕ್ಕೆ ಮುಂದಾಗಿದೆ.ಹೌದು ಉಡುಪಿ ಕಾಲೇಜಿನಲ್ಲಿ ಹಿಜಾಬ್‌ ಧರಿಸುವ ಪ್ರಕರಣ ಸೂಕ್ಷ್ಮ ಹಾಗೂ ಧಾರ್ಮಿಕ ವಿಚಾರವಾಗಿರುವುದರಿಂದ ಸದ್ಯಕ್ಕೆ ಇಲಾಖೆ ಯಾವುದೇ ತೀರ್ಮಾನ ಕೈಗೊಂಡಿಲ್ಲ.ಹೀಗಾಗಿ ಕಾಲೇಜಿ ನಲ್ಲಿ ಹಿಂದಿನ ಸಮವಸ್ತ್ರ ಹಾಗೂ ವಸ್ತ್ರ ಸಂಹಿತೆಯನ್ನು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ.

ಹೌದು ಇನ್ನೂ ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿಲ್ಲ.ಆದರೆ ಉಡುಪಿ ಕಾಲೇಜಿನಲ್ಲಿ ನಿಗದಿತ ಸಮವಸ್ತ್ರದಲ್ಲಿ ಕಾಲೇಜಿಗೆ ಹಾಜರಾಗಬೇಕು ಎನ್ನುವ ನಿಯಮವಿದೆ.ಅದರ ಪ್ರಕಾರ ನಡೆಯಬೇಕು ಎಂದು ಅಲ್ಲಿನ ಪ್ರಾಂಶುಪಾಲರು ತಿಳಿಸಿದ್ದು ಈ ಮಧ್ಯೆ, ವಿದ್ಯಾರ್ಥಿನಿಯರು ತಮ್ಮ ಆಯ್ಕೆಯ ವಸ್ತ್ರ ಧರಿಸಲು ಅನುಮತಿ ನೀಡುವಂತೆ ಬೇಡಿಕೆ ಇಟ್ಟಿದ್ದರು.

ಇದಕ್ಕಾಗಿ ಒಂದು ಉನ್ನತ ಮಟ್ಟದ ಸಮಿತಿ ರಚನೆಯನ್ನು ಮಾಡಿದ್ದು ವಿವಿಧ ರಾಜ್ಯಗಳ ಪದವಿಪೂರ್ವ ಕಾಲೇಜು ಗಳಲ್ಲಿರುವ ಸಮವಸ್ತ್ರ ನೀತಿಸಂಹಿತೆಯನ್ನು ಪರಿಶೀಲಿಸಿ ಸುಪ್ರೀಂ ಕೋರ್ಟ್‌,ಹೈಕೋರ್ಟ್‌ ನೀಡಿರುವ ತೀರ್ಪುಗ ಳನ್ನು ಅವಲೋಕಿಸಿ ರಾಜ್ಯದ ಎಲ್ಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ಅಥವಾ ವಸ್ತ್ರಸಂ ಹಿತೆ ನಿಗದಿಗೊಳಿಸುವ ಸಂಬಂಧ ವರದಿ ನೀಡಲು ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ.ಹಾಗೇ ಸಮಿತಿಯು ಅಧ್ಯಯನ ನಡೆಸಿ ಸಲ್ಲಿಸುವ ಶಿಫಾರಸು ಗಳನ್ನು ಪರಿಶೀಲಿಸಿ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.