ರಾಜ್ಯದ ಎಲ್ಲಾ ಶಾಲೆಗಳಲ್ಲಿ ಆಗಸ್ಟ್ 11 ರಿಂದ ಧ್ವಜಾರೋಹಣ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸೂಚನೆ…..

Suddi Sante Desk

ಬೆಂಗಳೂರು –

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲ ಸರ್ಕಾರಿ,ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು,ಪಿಯು ಕಾಲೇಜುಗಳು ಹಾಗೂ ಮದರಸಾಗ ಳಲ್ಲೂ ಆಗಸ್ಟ್ 11 ರಿಂದ 17 ರವರೆಗೆ ರಾಷ್ಟ್ರಧ್ವಜಾರೋ ಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಭಾರತ ಸ್ವಾತಂತ್ರ್ಯದ ಅಮೃ ಮಹೋತ್ಸವವನ್ನು ಅರ್ಥ ಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳು,ಪದವಿ ಪೂರ್ವ ಕಾಲೇಜುಗಳು ಹಾಗೂ ಮದರಸಾಗಳಲ್ಲಿ ಧ್ವಜಾರೋಹಣದ ಅಭಿಯಾನದ ಜೊತೆಗೆ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ,ಸ್ಮರಣೆಯ ಗೀತೆ,ಗಾಯನ,ಕ್ವಿಜ್,ಪ್ರಬಂಧ ಸ್ಪರ್ಧೆ,ಸ್ವಾತಂತ್ರ್ಯ ಹೋರಾಟ,ಸ್ವಾತಂತ್ರ್ಯ ಹೋರಾಟಗಾ ರರ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.