ದಸರಾ ಮುಗಿದ ಕೂಡಲೇ ಪ್ರಾಥ ಮಿಕ ಶಾಲೆಗಳು ಆರಂಭ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿಕೆ…..

Suddi Sante Desk

ಉಡುಪಿ –

ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ.ಹಲವಾರು ಜಿಲ್ಲೆಯಲ್ಲಿ ಪಾಸಿಟಿ ವಿಟಿ ಜೀರೋ ಇದೆ ಶಾಲೆ ಆರಂಭಿಸಬಹುದು ಎಂದು ತಜ್ಞರು ಅಭಿಪ್ರಾಯ ಕೊಟ್ಟಿದ್ದಾರೆ.ಹೀಗಾಗಿ ದಸರಾ ಮುಗಿದ ತಕ್ಷಣವೇ ಶಾಲೆಗಳನ್ನು ಆರಂಭ ಮಾಡೊದಾಗಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು

ಉಡುಪಿ ಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಗಳು ಬೆಂಗಳೂರಿನಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆಯು ತ್ತಾರೆ.ಸಿಎಂ ಬೊಮ್ಮಾಯಿ ಶೀಘ್ರ ಶಾಲೆ ಆರಂಭಿಸಲು ಆಸಕ್ತಿ ತೋರಿದ್ದಾರೆ ಎಂದರು.

ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಮೇರೆಗೆ ಶೀಘ್ರ ಶಾಲೆ ಆರಂಭಿಸುತ್ತೇವೆ.ಎಲ್ಲರಿಗೂ ಶಾಲೆ ಕಡ್ಡಾಯ ಮಾಡಿಲ್ಲ ಮುಂದೆಯೂ ಕಡ್ಡಾಯ ಮಾಡಲ್ಲ ಆನ್ ಲೈನ್ ಆಫ್ ಲೈನ್ ಎರಡು ಮಾದರಿಯಲ್ಲಿ ತರಗತಿಗಳು ನಡೆಯಲಿದೆ ಎಂದರು.


ಈಗ ಆರಂಭವಾಗಿರುವ ಶಾಲೆಗಳ ಹಾಜರಾತಿ ತೃಪ್ತಿಕರ ವಾಗಿದೆ.ಆನ್ ಲೈನ್ ತರಗತಿಯಿಂದ ಕೆಳ ಗ್ರಾಮೀಣ ಮಕ್ಕಳಿಗೆ ತೊಂದರೆ ಆಗಿದೆ.‌ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್‌ ಮಕ್ಕಳ ಹಾಜರಾತಿ ಶೇ.90ರಷ್ಟು ಇದೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.