ರಾಜ್ಯದ ಶಾಲೆಗಳಿಗೆ ಶೀಘ್ರದಲ್ಲೇ ಪ್ರತ್ಯೇಕ ಮಾರ್ಗಸೂಚಿ ಪ್ರತಿ ದಿನ ವರದಿ ನೀಡಲು ಶಿಕ್ಷಣ ಸಚಿವರ ಸೂಚನೆ…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಯಲ್ಲಿ ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಗಳನ್ನು ಪ್ರಕಟ ಮಾಡೊದಾಗಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಸೋಂಕು ಕಾಣಿಸಿಕೊಂಡಿರುವುದರಿಂದ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪ್ರತ್ಯೇಕ ಮಾರ್ಗಸೂಚಿ ಗಳನ್ನು ಹೊರಡಿಸುತ್ತೇವೆ ಎಂದರು.

ಈ ಬಾರಿ ಮಕ್ಕಳಲ್ಲಿ ಸೋಂಕು ತಡೆಗಟ್ಟಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದರು.ಇನ್ನೂ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದರೆ ಪರೀಕ್ಷೆ ಸೇರಿದಂತೆ ಭೌತಿಕ ತರಗತಿಗಳನ್ನು ನಿಲ್ಲಿಸಲು ಸರ್ಕಾರ ಸಿದ್ಧವಿದೆ.ಇಲಾಖೆಗೆ ಮಕ್ಕಳ ಆರೋಗ್ಯವೇ ಮುಖ್ಯ ಯಾರೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಭರವಸೆ ನೀಡಿದರು.

ಶಿಕ್ಷಣ ಇಲಾಖೆ ಅಧಿಕಾರಿ ಪ್ರತಿದಿನದ ವರದಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.ಸೋಂಕು ಹರಡುಕೆಯ ಬಗ್ಗೆ ಪ್ರತಿಗಂಟೆಗೂ ನಿಗಾವಹಿಸುತ್ತಿದ್ದಾರೆ.ಶಾಲಾ ಕಾಲೇಜು, ನವೋದಯ ಶಾಲೆಗಳು ವಸತಿ ಶಾಲೆಗಳಲ್ಲಿ ಸೋಂಕು ಹರಡುವಿಕೆ ಹೆಚ್ಚಾದರೂ ಕೂಡಲೇ ಭೌತಿಕ ತರಗತಿಗಳನ್ನು ನಿಲ್ಲಿಸಲಾಗುವುದು ಎಂದರು‌.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.