ಬೆಂಗಳೂರು –
ರಾಜ್ಯದಲ್ಲಿ ಈಗಾಗಲೇ 6 ರಿಂದ 12 ನೇ ತರಗತಿವರೆಗೆ ಶಾಲಾ-ಕಾಲೇಜು ಆರಂಭವಾಗಿದ್ದು ಶಾಲೆಗಳಲ್ಲಿ ವಿದ್ಯಾರ್ಥಿ ಗಳ ಭೌತಿಕ ಹಾಜರಾತಿ ಪ್ರಮಾಣ ಶೇ.90 ರಷ್ಟಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಾಲೆ ಆರಂಭಕ್ಕೆ ಶೌಚಾಲಯ ದ ವ್ಯವಸ್ಥೆ ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು
ಇನ್ನೂ ಪಠ್ಯಪುಸ್ತಕದಲ್ಲಿನ ದೋಷಗಳ ಬಗ್ಗೆ ದೂರುಗಳು ಬಂದಿರುವುದರಿಂದ ಇದಕ್ಕಾಗಿ ಒಂದು ಸಮಿತಿಯನ್ನು ರಚಿಸಲಾಗಿದೆ.ದೋಷಗಳನ್ನು ಸರಿಪಡಿಸುವ ಬಗ್ಗೆ ಆ ಸಮಿತಿ ಪರಾಮರ್ಶೆ ಮಾಡಲಿದೆ.ಅದೇ ರೀತಿ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕಾಯ್ದೆ ಪ್ರಕಾರ ಸದ್ಯದಲ್ಲೇ ಅಸೂಚನೆ ಹೊರಡಿಸಲಾಗುವುದು ಎಂದರು.