ಶಿಕ್ಷಕರ ವರ್ಗಾವಣೆ,ನಿಶ್ಚಿತ ಪಿಂಚಣಿ ಸಮಸ್ಯೆ ಯ ಸೂಕ್ತ ಕ್ರಮಕ್ಕೆ ಶಿಕ್ಷಣ ಸಚಿವರ ಸೂಚನೆ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿದ ಶಿಕ್ಷಣ ಸಚಿವರು…..

Suddi Sante Desk

ಬೆಂಗಳೂರು –

ಶಿಕ್ಷಕರ ವರ್ಗಾವಣೆ,ನಿಶ್ಚಿತ ಪಿಂಚಣಿ ಸಮಸ್ಯೆ ಯ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ನಾಡಿನ ಶಿಕ್ಷಕರ ಧ್ವನಿಯಾಗಿ ಶಿಕ್ಷಣ ಸಚಿವರಿಗೆ ಪತ್ರ ಬರೆದು ಒತ್ತಾಯ ಮಾಡಿದ್ದ ಮನವಿಗೆ ಶಿಕ್ಷಣ ಸಚಿವ ಬಿ‌ ಸಿ ನಾಗೇಶ್ ಸ್ಪಂದಿಸಿದ್ದಾರೆ.ಹೌದು ಈ ಒಂದು ವಿಚಾರ ಕುರಿತು ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಅವರು ಸಚಿವರಿಗೆ ಪತ್ರವನ್ನು ಬರೆದಿದ್ದರು.ಈ ಒಂದು ಮನವಿಗೆ ಶಿಕ್ಷಣ ಸಚಿವರು ಸ್ಪಂದಿಸಿ ಸೂಕ್ತ ಕ್ರಮಕ್ಕೆ ಸೂಚನೆ ನೀಡಿ ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವಂತೆ ಪತ್ರ ಬರೆದಿದ್ದಾರೆ

ಈ ಕೂಡಲೇ ಸದರಿಯವರ ಮನವಿಯನ್ನು ಪರಿಗಣಿಸಿ ಪರಿಶೀಲನೆ ನಡೆಸಿ ನಿಯಮಾನುಸಾರವಾಗಿ ಈ ಕೂಡಲೇ ಸೂಕ್ತವಾದ ಕ್ರಮವನ್ನು ಕೈಗೊಳ್ಳಲು ಸೂಚನೆಯನ್ನು ನೀಡಿ ವರ್ಗಾವಣೆ ಸೇರಿದಂತೆ ಹತ್ತಾರು ಸಮಸ್ಯೆ ಗಳ ನಡುವೆ ಸಿಕ್ಕು ನರಕಯಾತನೆ ಅನುಭವಿಸುತ್ತಿರುವ ಶಿಕ್ಷಕರ ಸಮಸ್ಯೆ ಗೆ ಸ್ಪಂದಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.