ಬೆಂಗಳೂರು –
ಇನ್ನೇನು ವರ್ಗಾವಣೆ ಪ್ರಕ್ರಿಯೆ ಆರಂಭವಾಗು ತ್ತದೆ ಎಂದುಕೊಂಡಿದ್ದ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ವರ್ಗಾವಣೆಗೆ ಬ್ರೇಕ್ ಹಾಕ ಲಾಗಿದ್ದು ಇದು ಒಂದು ವಿಚಾರವಾದರೆ ಇನ್ನೂ ಇತ್ತ 5 ವರ್ಷಕ್ಕಿಂತ ಹೆಚ್ಚು ಅವಧಿ ಕರ್ತವ್ಯ ನಿರ್ವಹಿಸಿದ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ ಈಗ ವರ್ಗಾವಣೆ ಭಾಗ್ಯವನ್ನು ಕಲ್ಪಿಸಲಾಗಿದೆ
ಹೌದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಯಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗಾವಣೆ ಮಾಡಲು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಆಯುಕ್ತರಿಗೆ ಸೂಚಿಸಿದ್ದಾರೆ.5 ವರ್ಷಕ್ಕಿಂತ ಹೆಚ್ಚಿನ ಅವಧಿಯಿಂದ ಒಒಡಿ ಮೇಲೆ ಕಾರ್ಯನಿರ್ವಹಿಸುತ್ತಿರುವವರನ್ನು ಕೂಡಲೇ ಬಿಡುಗಡೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚನೆಯನ್ನು ನೀಡಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕೆಲವರು ವಿಶೇಷ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದು, 1.50 ಲಕ್ಷದಿಂದ 3 ಲಕ್ಷ ರೂ. ವರೆಗೆ ವೇತನ ಪಡೆದು ಪಾಠ ಮಾಡದೆ ವಿಶೇಷ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ.ಇವರಿಗೆ ವೇತನ ನೀಡಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂ ತಾಗಿದೆ.ಕೆಲವು ವಿಶೇಷ ಅಧಿಕಾರಿಗಳ ವಿರುದ್ಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪಿಯುಸಿ ಸೀಟು ಕೊಡಿಸುವ ಲಾಬಿ ಅನುದಾನಿತ ಕಾಲೇಜುಗಳಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ,ನ್ಯಾಕ್ ಗ್ರೇಡ್ ಕೊಡಿಸಲು ಹಣಕ್ಕೆ ಬೇಡಿಕೆ ಇಡುವುದು ಮೊದ ಲಾದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಒಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..