7ನೇ ವೇತನ ಜಾರಿಗೆ ಒತ್ತಾಯ ಕಲಬುರಗಿಯಲ್ಲಿ ನೌಕರರ ಪ್ರತಿಭಟನೆ – ಜಿಲ್ಲಾಧ್ಯಕ್ಷ ರಾಜು ಲೇಂಗಟಿ ನೇತೃತ್ವದಲ್ಲಿ ನೌಕರರ ಸಂಘದ ನಿಯೋಗದಿಂದ ಶಾಸಕ ಅಲ್ಲಮಪ್ರಭು ಪಾಟೀಲ, ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಕೆ…..

Suddi Sante Desk
7ನೇ ವೇತನ ಜಾರಿಗೆ ಒತ್ತಾಯ ಕಲಬುರಗಿಯಲ್ಲಿ ನೌಕರರ ಪ್ರತಿಭಟನೆ – ಜಿಲ್ಲಾಧ್ಯಕ್ಷ ರಾಜು ಲೇಂಗಟಿ ನೇತೃತ್ವದಲ್ಲಿ ನೌಕರರ ಸಂಘದ ನಿಯೋಗದಿಂದ ಶಾಸಕ ಅಲ್ಲಮಪ್ರಭು ಪಾಟೀಲ, ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಕೆ…..

ಕಲಬುರಗಿ

7ನೇ ವೇತನ ಆಯೋಗ ಶಿಫಾರಸು ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ನೌಕರರು ಹೋರಾಟ ಮಾಡುತ್ತಿದ್ದು ಇತ್ತ ಈ ಒಂದು ಹೋರಾಟಕ್ಕೆ ಕಲಬುರಗಿ ಯಲ್ಲೂ ಬೆಂಬಲ ಕಂಡು ಬಂದಿದ್ದು
ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ನೇತೃತ್ವದಲ್ಲಿ ನೌಕರರ ಸಂಘ ನಿಯೋಗವು ಶಾಸಕ ಅಲ್ಲಮಪ್ರಭು ಪಾಟೀಲ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರಿಗೆ ಮನವಿ ಸಲ್ಲಿಸಿದರು.

ಶಾಸಕ ಅಲ್ಲಮಪ್ರಭು ಅವರನ್ನು ಭೇಟಿ ಮಾಡಿದ ನಿಯೋಗವು ನೌಕರರ ಬಹು ದಿನದ ಬೇಡಿಕೆ ಯಾದ ಏಳನೇ ವೇತನ ಸೇರಿ ಇನ್ನಿತರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆಯಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಫೌಜಿಯಾ ಅವರನ್ನು ಭೇಟಿ ಮಾಡಿದ ನಿಯೋಗವು, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ತರಲು ಹಾಗೂ ಸರ್ಕಾರಿ ನೌಕರರು ಮತ್ತು ಅವಲಂಬಿತ ಕುಟುಂಬ ಸದಸ್ಯರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯವನ್ನು ಮಾಡಿದರು

ಸಂಘದ ಪದಾಧಿಕಾರಿಗಳಾದ ಸಿದ್ದಲಿಂಗಯ್ಯ ಮಠಪತಿ, ಹಣಮಂತರಾಯ ಗೊಳಸಾರ, ಸತೀಶ ಸಜ್ಜನ್, ವಿಜಯಕುಮಾರ‌ ನಾಗೂರ, ವೀರೇಶ ಪೂಜಾರಿ, ಹಣಮಂತ‌ ಮರಡಿ, ಅವ್ವಣ್ಣ, ಧನಂಜಯ್ ಸೇರಿದಂತೆ ಅನೇಕ ನೌಕರರು ಈ ಒಂದು ಮನವಿ ಸಲ್ಲಿಸುವ ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಕಲಬುರಗಿ……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.