ಶಿಕ್ಷಕರನ್ನು ಪ್ರೋತ್ಸಾಹಿಸಿ,ಪಾಲಕ ಪೋಷಕರಲ್ಲಿ ವಿಶ್ವಾಸ ಮೂಡಿಸಿ CM ಟ್ವೀಟ್…..

Suddi Sante Desk

ಬೆಂಗಳೂರು –

ನಾಳೆಯಿಂದ ರಾಜ್ಯದಲ್ಲಿ ಶಾಲೆಗಳಲ್ಲಿ ತರಗತಿಗಳು ಆರಂಭವಾಗುತ್ತಿವೆ.ಈ ಒಂದು ವಿಚಾರ ಕುರಿತು ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಶಾಲೆ ಆರಂಭಕ್ಕೆ ಎಲ್ಲಾ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ. ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡು ವಂತೆ ಸಂಪುಟ ಸಹೋದ್ಯೋಗಿಗಳಿಗೆ ನಿರ್ದೇಶನ ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ.

ಶಿಕ್ಷಕರನ್ನು ಪ್ರೋತ್ಸಾಹಿಸಿ,ಪಾಲಕ-ಪೋಷಕರಲ್ಲಿ ವಿಶ್ವಾಸ ಮೂಡಿಸಿ.ಶಾಲೆಗಳಲ್ಲಿ ಕೈಗೊಂಡ ಮುಂಜಾ ಗೃತಾ ಕ್ರಮಗಳನ್ನು ಪರಿಶೀಲಿಸಿ ಎಂದು ಸಚಿವರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.ಮಕ್ಕಳು ಮತ್ತು ಪಾಲಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಕರೆ ನೀಡಿದರು.

ಸುರಕ್ಷತಾ ಕ್ರಮಗಳನ್ನು ಅನುಸರಿಸಿ.ಯಾವುದೇ ಆತಂಕ ಇಲ್ಲದೇ ಸರ್ಕಾರದ ಜೊತೆ ಸಹಕರಿಸಿ ಎಂದು ಕರೆ ನೀಡಿದ್ದಾರೆ.ಇದು ಪಾಲಕ ಪೋಷಕರಿಗೆ ಮುಖ್ಯಮಂತ್ರಿ ‌ಬೊಮ್ಮಾಯಿ ಅವರು ಮಾಡಿದ ಮನವಿಯಾಗಿದೆ‌.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.