ಅರಣ್ಯಾಧಿಕಾರಿ ಆತ್ಮಹತ್ಯೆ – ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಈರಪ್ಪ…..

Suddi Sante Desk

ವಿಜಯಪುರ –

ಅರಣ್ಯಾಧಿಕಾರಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ.ಹೌದು ಕೊಲ್ಹಾರ ಸೇತುವೆಯ ಮೇಲಿಂದ ಹಾರಿ ಕೊಲ್ಹಾರ ವಲಯ ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಈರಪ್ಪ ದುಂಡಪ್ಪ ದಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೃಷ್ಣಾ ನದಿಗೆ ಹಾರಿ ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದು ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೃಷ್ಣಾ ನದಿಯಲ್ಲಿ ನಡೆದಿದೆ.

ಸುಮಾರು 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ನಿವಾಸಿ ಈರಪ್ಪ ದುಂಡಪ್ಪ ದಟ್ಟಿ ಮಧ್ಯಾಹ್ನ ಕೃಷ್ಣಾ ನದಿ ಸೇತುವೆ ಮೇಲೆ ತನ್ನ ಬೈಕ್ ನಿಲ್ಲಿಸಿದ್ದಾರೆ.ಬೈಕ್‌ನಲ್ಲಿ ಮೊಬೈಲ್ ಹಾಗೂ ಹಗ್ಗವನ್ನಿಟ್ಟು ತನ್ನ ಅರಣ್ಯ ಇಲಾಖೆಯ ಸಮವಸ್ತ್ರ ಸಹಿತ ಸೇತುವೆ ಮೇಲಿಂದ ನದಿಗೆ ಹಾರಿದ್ದು ಇನ್ನೂ ಸುದ್ದಿ ತಿಳಿದ ಕೊಲ್ಹಾರ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಶೀಲನೆ ಮಾಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.