ಎಪ್ರಿಲ್‌ 12 ರಂದು 25 ಸಾವಿರ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸುತ್ತೇನೆ ಈಶ್ವರಪ್ಪ  – ಪಕ್ಷದ ನಾಯಕರ ವಿರುದ್ಧ ಗುಡುಗಿದ ಮಾಜಿ ಸಚಿವರು…..

Suddi Sante Desk
ಎಪ್ರಿಲ್‌ 12 ರಂದು 25 ಸಾವಿರ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸುತ್ತೇನೆ ಈಶ್ವರಪ್ಪ  – ಪಕ್ಷದ ನಾಯಕರ ವಿರುದ್ಧ ಗುಡುಗಿದ ಮಾಜಿ ಸಚಿವರು…..

ಶಿವಮೊಗ್ಗ

ಎಪ್ರಿಲ್‌ 12 ರಂದು 25 ಸಾವಿರ ಕಾರ್ಯಕ ರ್ತರೊಂದಿಗೆ ನಾಮಪತ್ರ ಸಲ್ಲಿಸುತ್ತೇನೆ ಈಶ್ವರಪ್ಪ  ಪಕ್ಷದ ನಾಯಕರ ವಿರುದ್ಧ ಗುಡುಗಿದ ಮಾಜಿ ಸಚಿವರು ಹೌದು

ಶಿವಮೊಗ್ಗ ಲೋಕಸಭ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಪ್ರಿಲ್‌ 12 ರಂದು 25 ಸಾವಿರ ಕಾರ್ಯಕರ್ತರೊಂದಿಗೆ ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ನಗರದ ಮಂದಿರದಲ್ಲಿ ನಡೆದ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.

ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ನನ್ನ ಗುರುತು ಕೂಡ ಇನ್ನೂ ತೀರ್ಮಾನವಾಗಿಲ್ಲ. ಮತದಾನದ ದಿನಾಂಕ ನಿಗದಿಯಾಗಿದೆ. ಆದ್ದರಿಂದ ಏಪ್ರಿಲ್ 12ರಂದು ಸಾವಿರಾರು ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುವೆ ಎಂದರು

ಈಶ್ವರಪ್ಪ ಈ ರೀತಿ ಘೋಷಿಸಿ ದಾಗ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರ ಎದೆಯಲ್ಲಿ ನಡುಕ ಆರಂಭವಾಗುತ್ತದೆ. ಶಕ್ತಿ ಪ್ರದರ್ಶನಕ್ಕೆ ಇಳಿದಾಗಿದೆ ಎಂದರು.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.