This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ಇನ್ನೂ ಮುಂದೆ ಮನೆಗೆ ಬರಲಿದ್ದಾರೆ ಶಿಕ್ಷಕರು – ವಿನೂತನ ಮಾದರಿಯಲ್ಲಿ ವಿದ್ಯಾಗಮ…..

WhatsApp Group Join Now
Telegram Group Join Now

ಬೆಂಗಳೂರು –

ಮತ್ತೆ ಸಧ್ಯ ಕರೋನ ಎರಡನೇ ಅಲೆಯ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಿದ್ಯಾಗಮ ಮತ್ತು ನೇರ ತರಗತಿಯನ್ನು ಬಂದ್ ಮಾಡಲಾಗಿದೆ. ಇನ್ನೂ ಮನೆ ಮನೆಗೆ ಭೇಟಿ ನೀಡುವಂತೆ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಶಿಕ್ಷಕರಿಗೆ ಸೂಚಿಸಿದೆ. ಈ ಮೂಲಕ ವಿದ್ಯಾಗಮವನ್ನು ಹೊಸ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಮುಂದಾಗಿ ದ್ದು ಇದರಿಂದ ಮಕ್ಕಳು ಮತ್ತಷ್ಟು ಖುಷಿಯಾಗಲಿ ದ್ದಾರೆ.ಈ ಮೂಲಕ ಮಕ್ಕಳು ಕಲಿಕೆಯನ್ನು ಮುಂದು ವರಿಸಲು ಪ್ರೇರೇಪಣೆ ನೀಡಬೇಕು ಎಂದು ನಿರ್ದೇ ಶನ ನೀಡಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ತಾಲೂಕಿನ ಪ್ರಾಥ ಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಮತ್ತು ಕ್ಲಸ್ಟರ್ ನ ಸಿಆರ್‌ಪಿ ಗಳಿಗೆ ಈ ಬಗ್ಗೆ ಜ್ಞಾಪನ ಪತ್ರ ಕಳುಹಿಸಿದ್ದಾರೆ. 1ರಿಂದ 5ನೇ ತರಗತಿಯ ಮಕ್ಕಳಿಗೆ ವಿದ್ಯಾಗಮದಂತೆ ಮನೆ ಮನೆಗೆ ಭೇಟಿ ನೀಡಿ ಅಭ್ಯಾಸ ಹಾಳೆ ನೀಡಿ ಕಲಿಕೆಯ ಅವಲೋಕನ ನಡೆಸಬೇಕು. 6ರಿಂದ 9ನೇ ತರಗತಿಗಳಿಗೆ ಎ.28ರ ವರೆಗೆ ನೇರ ತರಗತಿ ಸ್ಥಗಿತಗೊಳಿಸಲಾಗಿದ್ದು, ಈ ಅವಧಿಯಲ್ಲಿ ಮಕ್ಕಳ ಜೊತೆಗೆ ನಿರಂತರ ಸಂಪರ್ಕ ದಲ್ಲಿರಬೇಕು ಎಂಬ ಸೂಚನೆ ನೀಡಲಾಗಿದೆ

ಇನ್ನೂ ಎಲ್ಲ ಶಿಕ್ಷಕರು ಕಡ್ಡಾಯವಾಗಿ ಬೆಳಗ್ಗೆ 10 ರಿಂದ ಸಂಜೆ 4.30ರ ವರೆಗೆ ಶಾಲೆಯಲ್ಲಿ ಇರಬೇಕು. ರೂಪಣಾತ್ಮಕ ಮೌಲ್ಯಮಾಪನದ ಗ್ರೇಡ್‌ಗಳನ್ನು ನಿರ್ವಹಿಸಬೇಕು. ಶಾಲೆ ಗಳಲ್ಲಿರುವ ಅನಗತ್ಯ ವಸ್ತುಗಳ ವಿಲೇವಾರಿ ಮಾಡಬೇಕು. ಶಾಲಾವರಣ ಮತ್ತು ತರಗತಿ ಕೊಠಡಿ ಸ್ವತ್ಛತೆ ಕಾಪಾಡಬೇಕು. ಶಾಲಾ ತಪಾಸಣೆಗೆ ಬೇಕಾದ ದಾಖಲೆ ಸಿದ್ಧಪಡಿಸ ಬೇಕು ಗ್ರಂಥಾಲಯದಲ್ಲಿ ಶಿಥಿಲವಾಗಿರುವ ಪುಸ್ತಕ ಗಳನ್ನು ತೆಗೆದುಹಾಕಿ, ಉಳಿದ ಪುಸ್ತಕಗಳನ್ನು ಸರಿಯಾಗಿ ಜೋಡಿಸುವುದರ ಸಹಿತ ಆಡಳಿತಾತ್ಮಕ ಕಾರ್ಯಗಳನ್ನು ಈ ಅವಧಿಯಲ್ಲಿ ಮುಗಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.

ಇನ್ನೂ ಮುಖ್ಯವಾಗಿ ಜ್ಞಾಪನ ಪತ್ರದ ಆಧಾರದಲ್ಲಿ ಗ್ರಾಮೀಣ ಭಾಗದ ಬಹುತೇಕ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು, ಸಹ ಶಿಕ್ಷಕರನ್ನು ಮಕ್ಕಳ ಮನೆಗಳಿಗೆ, ವಠಾರಕ್ಕೆ ಕಳುಹಿಸಿ ಬೋಧನೆಗೆ ಸೂಚನೆ ನೀಡುತ್ತಿದ್ದಾರೆ. ಸರಕಾರ ಈ ಬಗ್ಗೆ ನಿರ್ದಿಷ್ಟ ಆದೇಶ ನೀಡಿಲ್ಲ ಎಂದರೂ ಮುಖ್ಯ ಶಿಕ್ಷಕರು ಒಪ್ಪು ತ್ತಿಲ್ಲ, ಮನೆ ಮನೆಗೆ ಭೇಟಿ ನೀಡಲು ಹೇಳುತ್ತಿ ದ್ದಾರೆ ಎಂದು ಶಿಕ್ಷಕ ಸಮೂಹ ಕಳವಳ ವ್ಯಕ್ತಪಡಿಸಿದೆ.

ಕೋವಿಡ್‌ ಕಾರಣ ಸರಕಾರ ನೇರ ತರಗತಿಗಳನ್ನು ಸ್ಥಗಿತ ಮಾಡಿದೆ. ಶಿಕ್ಷಕರು ಯಾರು ಕೂಡ ತರಗತಿ ನಡೆಸುವುದಿಲ್ಲ ಎಂದು ಹೇಳಿಲ್ಲ. ಆದರೂ ಶಿಕ್ಷಕರಿಗೆ ಈ ರೀತಿ ಮಾಡುವುದು ಸರಿಯಲ್ಲ. ಈ ಹಿಂದೆ ಮಕ್ಕಳ ಜತೆಗೆ ನೇರ ಸಂಪರ್ಕದಿಂದ ಕೊರೊನಾ ಹೆಚ್ಚಿದ ಕಾರಣ ವಿದ್ಯಾಗಮ ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಈಗ ಮತ್ತೆ ಅದನ್ನು ಜಾರಿಗೆ ತರುವುದು ಸರಿಯಲ್ಲ. ಒಂದೊಂದು ಜಿಲ್ಲೆಗೆ ಒಂದೊಂದು ನೀತಿ ಎಂಬಂತಾಗಿದೆ. ಸರಕಾರ ತರಗತಿ, ವಿದ್ಯಾಗಮ ಸ್ಥಗಿತಗೊಳಿಸಲು ನೀಡಿದ ಆದೇಶಕ್ಕೆ ಬೆಲೆ ಇಲ್ಲವೇ ಎಂದು ಶಿಕ್ಷಕರು ಪ್ರಶ್ನಿಸಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk