ಡಿಕೆಶಿ ಅವರನ್ನು ಭೇಟಿಯಾದ ಮಾಜಿ ಸಚಿವ ಸಂತೋಷ್ ಲಾಡ್ ಕ್ಷೇತ್ರದಲ್ಲಿನ ಹಲವು ವಿಚಾರಗಳ ಕುರಿತು ಚರ್ಚೆ…..

Suddi Sante Desk

ಬೆಂಗಳೂರು –

ಮಾಜಿ ಸಚಿವ ಸಂತೋಷ್ ಲಾಡ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದರು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲವೊಂದಿಷ್ಟು ವಿಚಾರ ವಿಷಯಗಳ ಕುರಿತಂತೆ ಚರ್ಚೆಯನ್ನು ಮಾಡಿದರು.ಮುಖ್ಯವಾಗಿ ಸಧ್ಯ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕರೋನಾ ವಸ್ತುಸ್ಥಿತಿ ಹಾಗೇ ಕೈಗೊಂಡಿರುವ ಕಾರ್ಯಗಳು ವಿತರಣೆ ಮಾಡಿರುವ ವ್ಯವಸ್ಥೆ ಹಾಗೇ ಪಕ್ಷದಿಂದ ಏನು ಮಾಡಲಾಗಿದೆ ಎಂಬ ವಿಚಾರ ಕುರಿತಂತೆ ಮಾಜಿ ಸಚಿವ ಸಂತೋಷ್ ಲಾಡ್ ಮಾಹಿತಿಯನ್ನು ನೀಡಿದರು.

ಇದರೊಂದಿಗೆ ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ ಚುನಾವಣೆ ಕುರಿತಂತೆಯೂ ಕೂಡಾ ಪಕ್ಷದ ರಾಜ್ಯಾಧ್ಯಕ್ಷರೊಂದಿಗೆ ಮಾಜಿ ಸಚಿವ ಸಂತೋಷ್ ಲಾಡ್ ಸುಧೀರ್ಘವಾಗಿ ಚರ್ಚೆಯನ್ನು ಮಾಡಿದರು.ಇವರೊಂದಿಗೆ ಎಐಸಿಸಿ ವಕ್ತಾರರಾದ ಐಶ್ವರ್ಯ ಮಹದೇವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.