ಸಚಿವ ಮುರುಗೇಶ ನಿರಾಣಿ ಕಾರ್ಖಾನೆಯಲ್ಲಿ ಸ್ಪೋಟ ಒರ್ವ ಸಾವು – ಗಂಭೀರವಾಗಿ ಗಾಯಗೊಂಡ ನಾಲ್ವರು ಸ್ಥಳಕ್ಕೇ ಪೊಲೀಸರು

Suddi Sante Desk
ಸಚಿವ ಮುರುಗೇಶ ನಿರಾಣಿ ಕಾರ್ಖಾನೆಯಲ್ಲಿ ಸ್ಪೋಟ ಒರ್ವ ಸಾವು – ಗಂಭೀರವಾಗಿ ಗಾಯಗೊಂಡ ನಾಲ್ವರು ಸ್ಥಳಕ್ಕೇ ಪೊಲೀಸರು

ಬಾಗಲಕೋಟೆ

ಸಚಿವ ಮುರುಗೇಶ ನಿರಾಣಿ ಮಾಲೀಕತ್ವದ ಕಾರ್ಖಾನೆಯೊಂದರಲ್ಲಿ ಡಿಸ್ಟಲರಿ ಸ್ಪೋಟ ಗೊಂಡು ಒರ್ವ ಸಾವಿಗೀಡಾದ ಘಟನೆ ಬಾಗ ಲಕೋಟೆಯಲ್ಲಿ ನಡೆದಿದೆ.ಹೌದು ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ

ಸಚಿವ ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಈ ಒಂದು ಸ್ಪೋಟ ಸಂಭವಿಸಿದ್ದು ಘಟನೆಯಲ್ಲಿ ಕಾರ್ಖಾನೆಯಲ್ಲಿ ಓರ್ವ ಮೃತಪಟ್ಟಿ ದ್ದರೆ ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂ ಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜುಂಜುರಕೊಪ್ಪಗಲ್ಲಿ ನಿವಾಸಿ ಗುರುನಾಥ ಹುಚ್ಚಣ್ಣನವರ್ ಎಂಬುವನೇ ಮೃತನಾಗಿದ್ದು ನಾಲ್ವರಿಗೆ ಗಾಯಗಳಾಗಿದ್ದು ಅವರನ್ನು ಮುಧೋಳ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಇನ್ನೂ ಈ ಒಂದು ಸುದ್ದಿಯನ್ನು ತಿಳಿದ ಇತ್ತ ಮುಧೋಳ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿ ಈ ಕುರಿತಂತೆ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.