ಜೂನ್ 14 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ – 500 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಮತ್ತೆ ಜೂನ್ 14 ರವರೆಗೆ ಲಾಕ್ ಡೌನ್ ಘೋಷಣೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ‌.ಬೆಂಗಳೂರಿನಲ್ಲಿ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು ಸುದ್ದಿಗೋಷ್ಠಿ ಮಾತನಾಡಿದ ಅವರು 500 ಕೋಟಿ ವಿಶೇಷ ಎರಡ ನೇ ಪ್ಯಾಕೇಜ್ ಇಂದು ಘೋಷಣೆ ಮಾಡಿದರು. 7-06-2021 ರಿಂದ ಶೇ.30 ರಷ್ಟು ಕೋವಿಡ್ ವರ್ತ ನೆ ಪಾಲಿಸಿ ತೆರೆಯಲು ಅನುಮತಿಸಲಾಗಿದೆ. ಪವರ್ ಲೂಮ್ ನೇಕಾರರಿಗೆ ಇಬ್ಬರು ಕೆಲಸಗಾರರಿಗೆ ಮೂರು ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು

ಇನ್ನೂ ಪ್ರಮುಖವಾಗಿ ಎರಡನೇಯ ಪ್ಯಾಕೇಜ್ ನಲ್ಲಿ ಚಲನ ಚಿತ್ರ, ದೂರು ದರ್ಶನ ಮಾಧ್ಯಮ ದವರಿಗೆ 3 ಸಾವಿರ ನೀಡಲಾಗುತ್ತದೆ. ಮೀನುಗಾ ರರಿಗೆ ಉಳಿತಾಯ ಮತ್ತು ಪರಿಹಾರ ಯೋಜನೆ ಯಡಿ ನೊಂದಾಯಿಸಿದಂತ ಮೀನುಗಾರರಿಗೆ ತಲಾ 3 ಸಾವಿರ ನೀಡಲಾಗುತ್ತದೆ ಎಂದರು.ಇದರೊಂದಿಗೆ ಮುಜುರಾಯಿ ದೇವಸ್ಥಾನದ ಅರ್ಚಕರು, ಸಿಬ್ಬಂದಿ ಗಳಿಗೆ ಸಿ ವರ್ಗದ ದೇವಸ್ಥಾನದಲ್ಲಿ ಕೆಲಸ ಮಾಡು ವಂತವರಿಗೆ ತಲಾ ಮೂರು ಸಾವಿರ ಮಸೀದಿಯಲ್ಲಿ ಕೆಲಸ ಮಾಡುವವರಿಗೆ ತಲಾ ಮೂರು ಸಾವಿರ ಕೊಡಲು ನಿರ್ಧಾರ ಮಾಡಲಾಗಿದೆ ಎಂದರು.

ಆಶಾ ಕಾರ್ಯಕರ್ತರು ಕೂಡ ಕೊರೋನಾ ನಿಯಂ ತ್ರಣದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೂ ಮೂರು ಸಾವಿರ ನೀಡಲಾಗುತ್ತದೆ.ಇದರಿಂದ 42574 ಕಾರ್ಯಕರ್ತೆಯರಿಗೆ ಸಹಾಯ ಆಗಲಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ನೀಡಲಾಗುತ್ತದೆ.ಎಲ್ಲಾ ಶಾಲೆಗಳು ಮುಚ್ಚಿದ್ದರೂ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ. ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ 5 ಸಾವಿರ ಪರಿಹಾರ. ನ್ಯಾಯವಾಧಿಗಳ ಕಲ್ಯಾಣ ನಿಧಿಗೆ 5 ಕೋಟಿ ನೀಡಲು ನಿರ್ಧರಿಸಲಾ ಗಿದೆ ಎಂದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.