ಧಾರವಾಡ –
ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಧಾರವಾಡದಲ್ಲಿ ತಿರಂಗಾ ಯಾತ್ರೆ ಮತ್ತು ಪಂಜಿನ ಮೆರವಣಿಗೆ ನಡೆಯಿತು.ನಗರದಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ನಗರದಲ್ಲಿ ಹಮ್ಮಿಕೊಂ ಡಿದ್ದ ಆಜಾದೀ ಕಾ ಅಮೃತ ಮಹೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ ವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು.
ಧಾರವಾಡ ಶಹರದಲ್ಲಿ ಆಯೋಜಿಸಿದ್ದ ತಿರಂಗಾ ಯಾತ್ರೆ ಹಾಗೂ ಪಂಜಿನ ಮೆರವಣಿಗೆಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರೊಂದಿಗೆ ಚಾಲನೆ ನೀಡಿ ನಂತರ ಬೃಹತ್ ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡರು. ನಗರದ ಪ್ರಮುಖ ಬೀದಿಗಳಲ್ಲಿ ಈ ಒಂದು ಪಂಜಿನ ಮೆರವಣಿಗೆ ಸಡಗರ ಸಂಭ್ರಮದಿಂದ ನಡೆಯಿತು.ಈ ಸಂದರ್ಭದಲ್ಲಿ ಮಾಜಿ ಸೈನಿಕರು,ಸುಮಾರು 300ಕ್ಕೂ ಹೆಚ್ಚು ಕ್ರೀಡಾಪಟುಗಳು,ಶಾಲಾ ಮಕ್ಕಳು ಹಾಗೂ ಶ್ವಾನ ದಳಗಳು ಭಾಗವಹಿಸಿದ್ದು ವಿಶೇಷವಾಗಿ ಕಂಡು ಬಂದಿತು
ಈ ಸಂದರ್ಭದಲ್ಲಿ ಶಾಸಕರಾದ ಅಮೃತ ದೇಸಾಯಿ, ಹು-ಧಾ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ, ಜಿಲ್ಲಾ ಅಧ್ಯಕ್ಷರಾದ,ಸಂಜಯ ಕಪಟಕರ, ಮಂಡಲ ಅಧ್ಯಕ್ಷರಾದ ಬಸವರಾಜ ಗರಗ ಪಾಲಿಕೆ ಸದಸ್ಯರಾದ, ಶಿವು ಹಿರೇಮಠ, ವಿಜಯಾನಂದ ಶೆಟ್ಟಿ, ರಾಮಣ್ಣ ಬಡಿಗೇರ್, ಆನಂದ್ ಯಾವಗಲ, ಸುರೇಶ ಬೇದರೆ, ಶ್ರೀಮತಿ ಚಂದ್ರಕಲಾ ಕೊಟಬಾಗಿ, ಶ್ರೀಮತಿ ಜ್ಯೋತಿ ಪಾಟೀಲ್ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.